ಚಂಡೀಗಢ: ಭಾರತ್ ಜೋಡೋ ಯಾತ್ರೆ ವೇಳೆ ಜಲಂಧರ್ ಕ್ಷೇತ್ರದ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ ಕೊನೆಯುಸಿರೆಳೆದಿರುವ ಘಟನೆ ಪಂಜಾಬ್ನ ಫಿಲ್ಲೌರ್ನಲ್ಲಿ ಇಂದು (ಜ.14) ಬೆಳಗ್ಗೆ ನಡೆದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಸಂತೋಖ್ ಸಿಂಗ್ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ಅವರ ಹೃದಯ ಬಡಿತ ಹೆಚ್ಚಾಗಿ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಲೂಧಿಯಾನದಲ್ಲಿರುವ ವಿರ್ಕ್ ಆಸ್ಪತ್ರೆಗೆ ದಾಖಲಿಸಲಾಯಿತು. ತಪಾಸಣೆ ನಡೆಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಯಾತ್ರೆಯನ್ನು ರದ್ದುಗೊಳಿಸಿ, ರಾಹುಲ್ ಗಾಂಧಿ ಆಸ್ಪತ್ರೆಗೆ ತೆರಳಿದ್ದಾರೆ.
#WATCH | Punjab: Congress MP Santokh Singh Chaudhary was taken to a hospital in an ambulance in Ludhiana, during Bharat Jodo Yatra. Details awaited.
(Earlier visuals) pic.twitter.com/upjFhgGxQk
— ANI (@ANI) January 14, 2023
ಸಂತೋಖ್ ಸಿಂಗ್ ನಿಧನಕ್ಕೆ ಕಾಂಗ್ರೆಸ್ ನಾಯಕರು ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದು, ಜಲಂಧರ್ನ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರ ಅಕಾಲಿಕ ಮರಣದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದಿದ್ದಾರೆ.
ਕਾਂਗਰਸ ਦੇ ਜਲੰਧਰ ਤੋਂ ਮੈਂਬਰ ਪਾਰਲੀਮੈਂਟ ਸੰਤੋਖ ਸਿੰਘ ਚੌਧਰੀ ਜੀ ਦੀ ਬੇਵਕਤੀ ਮੌਤ ਦਾ ਬੇਹੱਦ ਦੁੱਖ ਹੋਇਆ..ਪ੍ਵਮਾਤਮਾ ਵਿੱਛੜੀ ਰੂਹ ਨੂੰ ਸਕੂਨ ਬਖ਼ਸ਼ੇ ..ਵਾਹਿਗੁਰੂ
— Bhagwant Mann (@BhagwantMann) January 14, 2023
ಶ್ರದ್ಧಾ ವಾಕರ್ ಕೊಲೆ ಪ್ರಕರಣ: ಶವಪರೀಕ್ಷೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಮೂಳೆಗಳು ಬಿಚ್ಚಿಟ್ಟ ರಹಸ್ಯವಿದು…
64ನೇ ವಯಸ್ಸಿನಲ್ಲಿ ಮೂರನೇ ಮದುವೆ! ಹಿರಿಯ ನಟಿ ಜಯಸುಧಾ ಕೊಟ್ಟ ಸ್ಪಷ್ಟನೆ ಹೀಗಿದೆ…
ಪಿಎಂ ಮತ್ತು ಸಿಎಂ ಓಡಾಡೋ ಜಾಗದಲ್ಲಿ ಸ್ಯಾಂಟ್ರೋ ರವಿಯನ್ನು ಕರೆದೊಯ್ದಿದ್ದಕ್ಕೆ ಮಾಜಿ ಸಿಎಂ ಎಚ್ಡಿಕೆ ಆಕ್ರೋಶ