ನವದೆಹಲಿ : ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಬಗ್ಗೆ ಸಿಡಿಮಿಡಿಗೊಂಡಿರುವ ಮಾಜಿ ರಾಜ್ಯ ಸಚಿವ ನವಜೋತ್ ಸಿಂಗ್ ಸಿಧು ಅವರು ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಈ ಬಗ್ಗೆ ಖುದ್ದು ಸಿಧು ಅವರು, ಪ್ರಿಯಾಂಕಾರೊಂದಿಗೆ ನಿಂತಿರುವ ಫೋಟೋ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಈ ಸಭೆಯ ಬಗ್ಗೆ ನಿನ್ನೆ ರಾಹುಲ್ ಗಾಂಧಿ ಅವರನ್ನು ಕೇಳಿದಾಗ, ಯಾವುದೇ ಮೀಟಿಂಗ್ ಇಲ್ಲ ಎಂದಿದ್ದರು ಎನ್ನಲಾಗಿದೆ. ಇದೀಗ ಪ್ರಿಯಾಂಕಾ ಅವರೊಂದಿಗೆ ‘ದೀರ್ಘ ಸಭೆ’ ನಡೆಸಿದ್ದಾಗಿ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ಸಿಧು ಹೇಳಿದ್ದಾರೆ. ಅವರ ತಂಡದ ಪ್ರಕಾರ 4 ಗಂಟೆಗಳ ಕಾಲ ಈರ್ವರ ನಡುವೆ ಮಾತುಕತೆ ನಡೆದಿದೆ. ಆದರೆ ಸಭೆಯ ಮುಖ್ಯಾಂಶಗಳೇನೆಂದು ಇನ್ನೂ ತಿಳಿದುಬಂದಿಲ್ಲ.
ಇದನ್ನೂ ಓದಿ: ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನ
ಮುಂದಿನ ವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವ ಪಂಜಾಬ್ನ ರಾಜಕೀಯ ಬೆಳವಣಿಗೆಗಳು ಕುತೂಹಲಕಾರಿಯಾಗಿವೆ. ಪಂಜಾಬಿನಲ್ಲಿ ಸಿಎಂ ಅಮರಿಂದರ್ ಸಿಂಗ್ ಬಗ್ಗೆ ಪಕ್ಷದ ಕೆಲವು ನಾಯಕರಲ್ಲಿ ಮೂಡಿರುವ ಅಸಮಾಧಾನವನ್ನು ನೀಗಿಸಲು ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ ಪ್ರಯತ್ನಿಸುತ್ತಿದ್ದಾರೆ. ಪಂಜಾಬಿನ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಅಭಿಪ್ರಾಯಗಳನ್ನು ಕಲೆಹಾಕಲು ಮೂವರು ಹಿರಿಯ ನಾಯಕರ ತಂಡ ರಚಿಸಲಾಗಿದೆ. ಈ ತಂಡವು ರಾಜ್ಯ ಸರ್ಕಾರ ಮತ್ತು ಪಕ್ಷದ ರಾಜ್ಯ ಘಟಕ ಎರಡರಲ್ಲೂ ಬದಲಾವಣೆಗಳನ್ನು ಮಾಡಲು ಸೂಚಿಸಿದೆ ಎನ್ನಲಾಗಿದೆ. (ಏಜೆನ್ಸೀಸ್)
ಐಸ್ಕ್ರೀಂನಲ್ಲಿ ಇಲಿ ಪಾಷಾಣ ಬೆರೆಸಿದ ಕಿರಾತಕ! ಗಂಡಹೆಂಡತಿ ಜಗಳಕ್ಕೆ ಮಕ್ಕಳಿಗೆ ಸಜೆ!
ಕಾಂಗ್ರೆಸ್ ಸೇರುವ ಬಗ್ಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದೇನು?