More

    ಕಾಂಗ್ರೆಸ್ ಕಚೇರಿ ಮುಂದೆ ಕಾರ್ಯಕರ್ತರ ಸಂಭ್ರಮಾಚರಣೆ

    ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಮುನ್ನಡೆಯನ್ನು ಸಾಧಿಸಿದ್ದು, ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಬಿಜೆಪಿ ಸರ್ಕಾರದ ಘಟಾನುಘಟಿ ನಾಯಕರೇ ಹಿನ್ನಡೆಯಲ್ಲಿದ್ದು, ಕೈ ಅಭ್ಯರ್ಥಿಗಳು ಗೆಲುವಿನತ್ತ ಮುನ್ನುಗ್ಗಿದ್ದಾರೆ.

    ಇದನ್ನೂ ಓದಿ: ದಾಯಾದಿಗಳ ಕಲಹ; ಸೊರಬದಲ್ಲಿ ಮಧು ಬಂಗಾರಪ್ಪಗೆ ಗೆಲುವು

    ಪ್ರಸಕ್ತ ಚುನಾವಣೆಯಲ್ಲಿ ಕಮಾಲ್​ ಮಾಡಿರುವ ಕಾಂಗ್ರೆಸ್​ ಪಕ್ಷವು ಸ್ಪಷ್ಟ ಬಹುಮತವನ್ನು ಗಳಿಸಿ, ಸರ್ಕಾರವನ್ನು ರಚಿಸುವ ಸಾಧ್ಯತೆಗಳು ನಿಚ್ಚಳವಾಗಿವೆ. ಹೀಗಾಗಿ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.

    ಕೆಪಿಸಿಸಿ ಕಚೇರಿಯ ಮುಂದೆ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಕುಣಿದು ಕುಪ್ಪಳಿಸಿ ಸಂಭ್ರಮಚಾರಣೆಯನ್ನು ಶುರು ಮಾಡಿದ್ದಾರೆ. ಅಲ್ಲದೇ ಚುನಾವಣಾ ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿರುವ ಕಾಂಗ್ರೆಸ್​ ನಾಯಕರ ಮುಖದಲ್ಲಿ ಮಂದಹಾಸ ಮೂಡಿದ್ದು, ಕಾರ್ಯಕರ್ತರತ್ತ ಕೈ ಬೀಸುತ್ತಿದ್ದಾರೆ.(ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts