ಬಾದಾಮಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಬಾದಾಮಿಗೆ ಆಗಮಿಸಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು-ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.
ಜಾನಪದ ಕಲಾ ತಂಡಗಳ ಮೆರಗಿನೊಂದಿಗೆ ಮೆರವಣಿಗೆ ಮೂಲಕ ಕಾರ್ಯಕ್ರಮದ ವೇದಿಕೆಗೆ ಕರೆದೊಯ್ದ ಅಭಿಮಾನಿಗಳು ದಾರಿಯುದ್ದಕ್ಕೂ ಹೂ ಮಳೆ ಸುರಿಸಿ, ಕಬ್ಬಿನ ಹಾರ ಹಾಕುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯರಮನ್ನು ಸ್ವಾಗತಿಸಲು ರಸ್ತೆಯುದ್ದಕ್ಕೂ ಸಾವಿರಾರು ಮಂದಿ ಸೇರಿದ್ದು ಮತ್ತಷ್ಟು ವಿಶೇಷವೆನ್ನಿಸಿತ್ತು.
ಇದನ್ನು ಓದಿ: ಹಾಲಿಗಾಗಿ ಅಂಗಡಿಗೆ ಹೋಗಬೇಕಾಗಿಲ್ಲ..ಇನ್ಮುಂದೆ ಮನೆ ಬಾಗಿಲಿಗೇ ಬರಲಿದೆ ಫ್ರೆಶ್ ಮಿಲ್ಕ್
ಇದನ್ನು ಓದಿ: SC-ST ಮೀಸಲಾತಿ ವಿಳಂಬ ಖಂಡಿಸಿ ಕಾಂಗ್ರೆಸ್ ನಾಯಕರಿಂದ ರಾಜಭವನ ಚಲೋ; ಪೊಲೀಸ್ ವಶಕ್ಕೆ