More

    ಭಿನ್ನ ಪಕ್ಷದ ಕಾರ್ಯಕರ್ತರ ನಡುವಿನ ಕಿತ್ತಾಟ; ಚಾಕು ಇರಿತಕ್ಕೆ ಒಳಗಾದ ಕಾಂಗ್ರೆಸ್​ ಕಾರ್ಯಕರ್ತ!

    ದಾವಣಗೆರೆ: ಚುನಾವಣೆ ನಡೆದ ಬಳಿಕ ಇದೀಗ ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಕಿತ್ತಾಟ ಶುರುವಾಗಿದ್ದು ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತ ಒಬ್ಬರಿಗೆ ಚಾಕು ಇರಿಯಲಾಗಿದೆ.

    ಸದ್ಯ ಗಾಯಾಳುವನ್ನು ಮಧು (24) ಎಂದು ಗುರುತಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವೀಣ್, ಪ್ರಕಾಶ್, ತೀರ್ಥಲಿಂಗ ಸೇರಿ ಕೆಲ‌ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪ ಹೊರಿಸಲಾಗಿದೆ.

    ಈ ಘಟನೆ ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ನಡೆದಿದ್ದು ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶಾಂತನಗೌಡ ಗೆದ್ದ ಹಿನ್ನೆಲೆ ಗ್ರಾಮದಲ್ಲಿ‌ ಪಟಾಕಿ ಹಚ್ಚಿದ ವಿಚಾರಕ್ಕೆ ಜಗಳ ಶುರುವಾಗಿತ್ತು. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts