More

    ರಾಮಮಂದಿರ ಉದ್ಘಾಟನೆಯನ್ನು ಕಾಂಗ್ರೆಸ್​ ರಾಜಕೀಯಗೊಳಿಸುತ್ತಿದೆ: ಹಿಮಾಂತ ಬಿಸ್ವಾಸ್​ ಶರ್ಮಾ

    ಗುವಾಹಟಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಭಕ್ತರು ಕಾತುರದಿಂದ ಕಾಯುತ್ತಿದ್ಧಾರೆ. ಇತ್ತ ರಾಮಮಂದಿರ ಉದ್ಘಾಟನೆ ಕಾಂಗ್ರೆಸ್​ ಹಾಘೂ ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದ್ದು, ಕಾಂಗ್ರೆಸ್​ ರಾಮಮಂದಿರದ ವಿಚಾರವನ್ನು ರಾಜಕೀಯಗೊಳಿಸುತ್ತಿದೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾಸ್​ ಶರ್ಮಾ ಆರೋಪಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಹಿಮಾಂತ, ರಾಹುಲ್ ಗಾಂಧಿ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯಗೊಳಿಸುತ್ತಿದ್ದಾರೆ. ಇದು ರಾಜಕೀಯ ಕಾರ್ಯಕ್ರಮವಲ್ಲ, ಧಾರ್ಮಿಕ ಕಾರ್ಯಕ್ರಮ. ಇದು ನಮಗೆ ಐತಿಹಾಸಿಕ ದಿನ, ಭಾರತೀಯ ನಾಗರಿಕತೆಯ ವಿಜಯದ ದಿನ ಎಂದು ಬಣ್ಣಿಸಿದ್ದಾರೆ.

    ಇದನ್ನೂ ಓದಿ: ಟ್ರೆಡಿಷನಲ್​ ಡ್ರೆಸ್​ನಲ್ಲಿ ಮಿಂಚಿದ ಗುಳಿಕೆನ್ನೆ ಚೆಲುವೆ; ನಿಮ್ಮ ನಗುವೇ ಸುಂದರ ಎಂದ ಫ್ಯಾನ್ಸ್​

    ನಿಮ್ಮ ಸಹಚರರು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದಾರೆ, ಅದನ್ನು ರಾಜಕೀಯ ಸಮಾರಂಭವನ್ನಾಗಿ ಮಾಡಿದ್ದಾರೆ. ಒಂದು ವೇಳೆ ಕಾಂಗ್ರೆಸ್​ ಪಕ್ಷದ ನಾಯಕರು ಕಾರ್ಯಕ್ರಮದಲ್ಲಿ ಹಾಜರಾಗಿ ಮುಂದಿನ ಸಾಲಿನಲ್ಲಿ ಕುಳಿತುಕೊಂಡರೆ ಯಾವುದೇ ರಾಜಕೀಯವಿರುವುದಿಲ್ಲ. ಧಾರ್ಮಿಕ ಕಾರ್ಯಕ್ರಮವನ್ನು ಕಾಂಗ್ರೆಸ್​ನವರು ಏಕೆ ರಾಜಕೀಯಗೊಳಿಸುತ್ತಿದ್ದಾರೆ ಎಂದು ಈವರೆಗೆ ನನಗೆ ಅರ್ಥವಾಗಿಲ್ಲ.

    ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ತಮ್ಮ ಹಿಂದೂ ವಿರೋಧಿ ಕಲ್ಪನೆಯನ್ನು ಬಳಸಿಕೊಂಡು ಕಾರ್ಯಕ್ರಮವನ್ನು ರಾಜಕೀಯಗೊಳಿಸಲು ಯತ್ನಿಸುತ್ತಿದ್ದಾರೆ. ಎಲ್ಲರೂ ರಾಮಲಲ್ಲಾನ ದರ್ಶನವನ್ನು ಪಡೆಯುತ್ತಾರೆ ಹೊರತು ಯಾವ ರಾಜಕೀಯ ಭಾಷಣವಿರುವುದಿಲ್ಲ. ಕಾಂಗ್ರೆಸ್​ನವರೇ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಇದನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಅಸ್ಸಾಂ ಸಿಎಂ ಹಿಮಾಂತ ಬಿಸ್ವಾಸ್​ ಶರ್ಮಾ ಕಿಡಿಕಾರಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts