More

    ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಕಾಂಗ್ರೆಸ್​; ರಾಜ್ಯದಿಂದ ಅಚ್ಚರಿಯ ಆಯ್ಕೆ

    ನವದೆಹಲಿ: ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದಿಂದ ಅಚ್ಚರಿಯ ಆಯ್ಕೆಯನ್ನು ಮಾಡಿದೆ.

    ಕರ್ನಾಟಕದಿಂದ ದೆಹಲಿ ಮೂಲದ ಅಜಯ್​ ಮಾಕೆನ್​, ಹಾಲಿ ಸದಸ್ಯರಾದ ಡಾ. ಸೈಯದ್​ ನಾಸೀರ್​ ಹುಸೇನ್​ ಹಾಗೂ ಜಿ.ಸಿ. ಚಂದ್ರಶೇಖರ್​ ಅವರನ್ನು ಆಯ್ಕೆ ಮಾಡಲಾಗಿದೆ. ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಮತ್ತು ತೆಲಂಗಾಣದಿಂದ ರೇಣುಕಾ ಚೌಧರಿ ಮತ್ತು ಎಂ.ಅನಿಲ್ ಕುಮಾರ್ ಯಾದವ್​ಗೆ ಟಿಕೆಟ್​ ನೀಡಲಾಗಿದೆ.

    ಫೆಬ್ರವರಿ 27ರಂದು ನಡೆಯುವ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಕಾಂಗ್ರೆಸ್​ನಿಂದ ಮೂರು ಹಾಗೂ ಬಿಜೆಪಿಯಿಂದ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿಯಿಂದ ಬಾಗಲಕೋಟೆ ಮೂಲದ ಮಾಜಿ ವಿಧಾನಪರಿಷತ್​ ಸದಸ್ಯ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್​ ನೀಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts