More

    ಧ್ರುವ ನಾರಾಯಣಗೆ ಶ್ರದ್ದಾಂಜಲಿ

    ಹಾವೇರಿ: ಕೆಪಿಸಿಸಿ ಕಾರ್ಯಧ್ಯಕ್ಷ ಆರ್.ಧ್ರುವ ನಾರಾಯಣ ನಿಧನರಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು.
    ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಮಾತನಾಡಿ, ಧ್ರುವ ನಾರಾಯಣ ಅವರ ಸಾಮಾಜಿಕ ಕಾಳಜಿ, ಪಕ್ಷನಿಷ್ಠೆ ಅಪಾರವಾಗಿತ್ತು. ಸಮಾಜದ ಕಟ್ಟ ಕಡೆಯ ಜನರ ಬಗ್ಗೆ ಅವರಿಗಿರುವ ತುಡಿತ ಹಾಗೂ ಅವರ ಜತೆಗಿನ ಒಡನಾಟವನ್ನು ಯಾರೂ ಮರೆಯುವಂತಿಲ್ಲ ಎಂದು ನೆನೆದರು.
    ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕೊಟ್ರೇಶಪ್ಪ ಬಸೆಗಣ್ಣಿ, ಎಸ್‌ಎಫ್‌ಎನ್ ಗಾಜಿಗೌಡ್ರ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ ಪಿ.ಎಸ್.ಬಿಷ್ಟನಗೌಡ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹಿರೇಮಠ, ಇತರರು ಉಪಸ್ಥಿತರಿದ್ದರು.
    ಸಂತಾಪ : ಧ್ರುವ ನಾರಾಯಣ ನಿಧನಕ್ಕೆ ಕೆಪಿಸಿಸಿ ಕಾರ್ಯದರ್ಶಿ ಡಾ.ಪ್ರಕಾಶಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಇತರ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts