ಕಾಂಗ್ರೆಸ್ ಬೆಂಬಲಿತರಿಗೆ ಆಡಳಿತದ ಚುಕ್ಕಾಣಿ

blank

ಪಿರಿಯಾಪಟ್ಟಣ: ತಾಲೂಕಿನ ರಾಮನಾಥತುಂಗ ಗ್ರಾಮ ಪಂಚಾಯಿತಿಯ ಹೊಸಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 9 ಜನ ಕಾಂಗ್ರೆಸ್ ಬೆಂಬಲಿತರು ಜಯಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

blank

ಸಹಕಾರ ಸಂಘದ 10 ನಿರ್ದೇಶಕರ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಒಂಬತ್ತು ಜನ ಕಾಂಗ್ರೆಸ್ ಬೆಂಬಲಿತರು ಮತ್ತು ಒಬ್ಬರು ಜೆಡಿಎಸ್ ಬೆಂಬಲಿತರು ಜಯಶಾಲಿಯಾಗಿದ್ದಾರೆ.
ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಮಾದೇಗೌಡ, ಪಾಲಾಕ್ಷ, ಬೀರೇಶ್, ರಮೇಶ್, ವಿರೂಪಾಕ್ಷ, ಬೊಮ್ಮರಾಯ, ಸುರೇಶ, ನಿಂಗರಾಜ್, ಭಾಗ್ಯ, ಸಾಕಮ್ಮ ಅವರು ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಹುಣಸೂರು ಸಹಕಾರ ಇಲಾಖೆಯ ಹಿರಿಯ ನಿರೀಕ್ಷಕ ಸಿ.ಎನ್.ಗಿರೀಶ್ ವಿಜೇತರ ಹೆಸರುಗಳನ್ನು ಘೋಷಿಸಿದರು.
ತಾಪಂ ಮಾಜಿ ಸದಸ್ಯ ಆರ್.ಎಸ್.ಮಹದೇವ್ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಒಪ್ಪಿ ಸ್ಥಳೀಯ ಸಂಸ್ಥೆಗಳಲ್ಲಿ ಮತದಾರರು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದಾರೆ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ಟಿ.ರೇವಣ್ಣ, ಗ್ರಾಪಂ ಸದಸ್ಯರಾದ ಹರೀಶ್, ಪರಮೇಶ್, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್.ಎ.ಮಹದೇವ, ಮುಖಂಡರಾದ ಆರ್.ಟಿ.ರಾಮನಾಯಕ, ಎಂ.ಬೋರೇಗೌಡ, ಪುನೀತ್, ಮಹೇಶ್, ಉಮೇಶ್, ಮಾಯಿಗೌಡ, ಜಗದೀಶ್, ಚಂದ್ರಶೇಖರ ಇತರರಿದ್ದರು.

 

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…