ತಿರುವನಂತಪುರಂ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಫ್ಯಾಮಿಲಿ ಪಾಲಿಟಿಕ್ಸ್ ಹೆಚ್ಚು ಸದ್ದು ಮಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ ತಂದೆಯೇ ತನ್ನ ಪುತ್ರ ಚುನಾವಣೆಯಲ್ಲಿ ಸೋಲಲಿ ಎಂದು ಶಾಪ ಹಾಕಿರುವ ಘಟನೆ ಕೇರಳದಲ್ಲಿ ನಡೆದಿದೆ. ಈ ಘಟನೆ ಎಲ್ಲರ ಗಮನ ಸೆಳೆದಿದ್ದು, ಸಖತ್ ಸದ್ದು ಮಾಡುತ್ತಿದೆ.
ಕಳೆದ ಕೆಲ ತಿಂಗಳ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಎಕೆ ಆ್ಯಂಟನಿ ಪುತ್ರ ಅನಿಲ್ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎಂದು ಶಾಪ ಹಾಕಿದ್ದಾರೆ. ಈ ಸುದ್ದಿ ಎಲ್ಲೆಡೆ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದಲ್ಲಿ ಎಣ್ಣೆ ರೇಟ್ ಕಡಿಮೆ ಮಾಡ್ತೀವಿ ಎಂದು ಭರವಸೆ ನೀಡಿದ ಮಾಜಿ ಸಿಎಂ
ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಕೆ ಆ್ಯಂಟನಿ, ಕೇರಳದ ಪಟ್ಟನಂತಿಟ್ಟ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನಿಲ್ ಈ ಚುನಾವಣೆಯಲ್ಲಿ ಸೋಲಬೇಕು. ಕಾಂಗ್ರೆಸ್ ಅಭ್ಯರ್ಥಿ ಆ್ಯಂಟೋ ಆ್ಯಂಟೋನಿಯನ್ನು ಜನ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ನನ್ನ ಮಗ ಬಿಜೆಪಿ ಸೇರಿರುವುದನ್ನು ತಪ್ಪು ಎಂದು ಹೇಳುತ್ತೇನೆ ವಿರೋಧಿಸುತ್ತೇನೆ. ಏಕೆಂದರೆ ಕಾಂಗ್ರೆಸ್ ನನ್ನ ಧರ್ಮವಾಗಿದ್ದು ನಾನು ನನ್ನ ಮಗನ ಕ್ರಮವನ್ನು ಸಂಪೂರ್ಣವಾಗಿ ವಿರೋಧಿಸುತ್ತೇನೆ. ಅವನು ಬುದ್ದಿ ಕಲಿಯಬೇಕೆಂದರೆ ಚುನಾವಣೆಯಲ್ಲಿ ಸೋಲಬೇಕು ಎಂದು ಎಕೆ ಆ್ಯಂಟೋನಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.