ಚಾಮರಾಜನಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗದಲ್ಲೇ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುರುವಂತಹ ಘಟನೆ ನಡೆದಿದೆ. ಚಾಮರಾಜನಗರ ಗ್ರಾಮಾಂತರ ಠಾಣೆಯ ಮಹೇಶ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಕಾನ್ಸ್ಟೇಬಲ್.
ಮಹೇಶ್, ಎಸ್ಪಿ ಕಚೇರಿ ಮುಂಭಾದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಪ್ರಾಣಪಾಯದಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಸುಟ್ಟ ಗಾಯಗಳಾಗಿರುವ ಮಹೇಶ್ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ತವ್ಯ ನಿರ್ಲಕ್ಷ್ಯತೆ ಹಿನ್ನೆಲೆ ಮಹೇಶ್ ಸೇರಿದಂತೆ ವಿವಿಧ ಠಾಣೆಗಳ 7 ಮಂದಿಯನ್ನು ಎಸ್ಪಿ ಶಿವಕುಮಾರ್ ವರ್ಗಾವಣೆ ಮಾಡಿದ್ದರು. ನಂತರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಸದ್ಯ ವಿಚಾರಣೆಗೆ ಹೆದರಿ ಹಾಗು ವರ್ಗಾವಣೆಯಿಂದ ಬೇಸತ್ತು ಕಾನ್ಸ್ಟೇಬಲ್ ಮಹೇಶ್ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಘಟನೆಯ ಬಗ್ಗೆ ಎಸ್ಪಿ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ವೈಯಕ್ತಿಕ ಕಾರಣಗಳಿಂದ ಮಹೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಿದ್ದಾರೆ.