More

    ಸಮಾಜದ ಅಭಿವೃದ್ಧಿಗೆ ಮಹಿಳೆಯರ ಕೊಡುಗೆ ಅಪಾರ

    ಬಣಕಲ್: ಮಹಿಳೆ ಸಾಮಾಜಿಕ ಹಾಗೂ ಆರ್ಥಿಕವಾಗಿ ಸಬಲತೆ ಸಾಧಿಸಬೇಕು. ಸಮಾಜ ಅಭಿವೃದ್ಧಿಯಾಗ ಬೇಕಾದರೆ ಹೆಣ್ಣನ್ನು ಪೂಜಿಸುವ ಕಾರ್ಯವಾಗಬೇಕಿದೆ ಎಂದು ರಾಯಚೂರಿನ ಪೋತ್ನಾಳ ವಿಮುಕ್ತಿ ಸಂಸ್ಥೆ ನಿರ್ದೇಶಕ ಾ.ಸತೀಶ್ ೆನಾರ್ಂಡಿಸ್ ಹೇಳಿದರು.
    ಕಪುಚಿನ್ ಕೃಷಿಕ ಸೇವಾ ಕೇಂದ್ರ, ವಿಮುಕ್ತಿ ಬಣಕಲ್‌ನಿಂದ ಬಣಕಲ್ ಚರ್ಚ್ ಹಾಲ್‌ನಲ್ಲಿ ನಡೆದ ಮಹಿಳಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸಿದ್ದಾಳೆ. ಸಮಾಜದ ಅಭಿವೃದ್ಧಿಗೆ ಮಹಿಳೆ ಕೊಡುಗೆ ಅಪಾರ ಎಂದರು.
    ಚಿಕ್ಕಮಗಳೂರು ಧರ್ಮ ಪ್ರಾಂತ್ಯದ ಸಮಾಜ ಸೇವಾ ಸಂಸ್ಥೆ ನಿರ್ದೇಶಕ ಾ.ಆರ್.ಶಾಂತರಾಜ್ ಮಾತನಾಡಿ, ಸಂಘಗಳಿಂದ ಮಹಿಳೆಯರು ಧೈರ್ಯ ಹಾಗೂ ಆರ್ಥಿಕವಾಗಿ ಸಬಲರಾಗಲು ಮಹಿಳಾ ಹಕ್ಕುಗಳು ಸಹಕಾರಿಯಾಗಿವೆ. ಮಹಿಳೆ ವಿವಿಧ ಕ್ಷೇತ್ರಗಳಲ್ಲಿ ಪುರುಷ ಸಮಾನವಾಗಿ ದುಡಿಯುತ್ತಿದ್ದು, ಮಹಿಳೆಯು ಸಮಾಜದಲ್ಲಿ ಅಮ್ಮನಾಗಿ, ಸಹೋದರಿಯಾಗಿ ಗೌರವಯುತವಾಗಿ ನಡೆಯುವುದನ್ನು ನಾವೆಲ್ಲ ಕಲಿಯಬೇಕಿದೆ ಎಂದರು.
    ಗ್ರಾಪಂ ಅಧ್ಯಕ್ಷೆ ಅತಿಕ ಭಾನು, ಬಣಕಲ್ ವಿಮುಕ್ತಿ ನಿರ್ದೇಶಕ ಾ.ಎಡ್ವಿನ್ ಡಿಸೋಜ, ವಿಮುಕ್ತಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಯಶೋಧ, ವಿಂದ್ಯಾ ಯೋಗಿಶ್ ಶೆಟ್ಟಿ, ಪುಷ್ಪಾ, ಪೈಝಾ, ಪದಾಧಿಕಾರಿಗಳಾದ ಸಾವಿತ್ರಿ, ದೇವಕಿ, ಪಾರ್ವತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts