More

    ಕೌಶಲ ಸದುಪಯೋಗದಿಂದ ಯಶಸ್ಸು

    ಕಾರ್ಕಳ: ಕಲಿಕೆಗೆ ಯಾವತ್ತೂ ಕೊನೇ ಇಲ್ಲ ಹಾಗೂ ವಯಸ್ಸಿನ ಮಿತಿ ಇಲ್ಲ. ಪ್ರತಿಯೊಬ್ಬರಲ್ಲಿಯೂ ತನ್ನದೇ ಕೌಶಲಗಳಿರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡು ಯಶಸ್ಸು ಪಡೆಯಬೇಕು ಎಂದು ಮಣಿಪಾಲ ಕೌಶಲ ಅಭಿವೃದ್ಧಿ ಕೇಂದ್ರ ನಿರ್ದೇಶಕ ಬ್ರಿಗೇಡಿಯರ್ ಡಾ.ಸುರ್ಜಿತ್ ಸಿಂಗ್ ಪಾಬ್ಲ ಹೇಳಿದರು.

    ಶ್ರೀ ಭುವನೇಂದ್ರ ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಹಾಗೂ ಮಣಿಪಾಲ ಕೌಶಲ ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ಇತ್ತೀಚೆಗೆ ಒಡಂಬಡಿಕೆ ಪತ್ರದ ವಿನಿಮಯ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪ್ರಾಚಾರ್ಯ ಡಾ.ಮಂಜುನಾಥ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ದತ್ತಾತ್ರೇಯ ಮಾರ್ಪಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಐಕ್ಯೂಎಸಿ ಸಂಯೋಜಕ ಪ್ರೊ.ನಾಗಭೂಷಣ್, ಡಾ.ಎ.ಎನ್.ಕಾಂತರಾಜ್, ಡಾ.ನಾರಾಯಣ ಶೆಣೈ, ಡಾ.ಅಂಜಯ್ಯ ಮೊದಲಾದವರು ಉಪಸ್ಥಿತರಿದ್ದರು. ಪ್ರೇರಣಾ ಕಾರ್ಯಕ್ರಮ ನಿರೂಪಿಸಿದರು. ದೀಕ್ಷಾ ಸ್ವಾಗತಿಸಿದರು. ಸ್ವಾತಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts