ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲು ಶಿಕ್ಷೆ ವಿಧಿಸಲು ದೆಹಲಿ ಪಟಿಯಾಲಾ ನ್ಯಾಯಾಲಯ ಆದೇಶ ನೀಡಿತ್ತು.
ಅವರಲ್ಲಿ ವಿನಯ್ ಶರ್ಮಾ(26) ಮತ್ತು ಮುಕೇಶ್ ಕುಮಾರ್ ಸಿಂಗ್ (32) ಸುಪ್ರೀಂಕೋರ್ಟ್ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇಂದು ಬೆಳಗ್ಗೆ ಅರ್ಜಿಯನ್ನು ವಜಾಗೊಳಿಸಿತ್ತು.
ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಅಪರಾಧಿ ಮುಕೇಶ್ ಕುಮಾರ್ ಸಿಂಗ್ ಅವರು ಕ್ಷಮಾದಾನ ಕೋರಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಅಪರಾಧಿಗಳಿಗೆ ಇರುವ ಕೊನೇ ಕಾನೂನು ಪ್ರಕ್ರಿಯೆಯಾಗಿದೆ. ಮುಕೇಶ್ ಹೊರತು ಪಡಿಸಿ ಇನ್ಯಾವ ಅಪರಾಧಿಗಳು ಅರ್ಜಿ ಸಲ್ಲಿಸಿದ ಬಗ್ಗೆ ವರದಿಯಾಗಿಲ್ಲ. (ಏಜೆನ್ಸೀಸ್)