ಪುಣೆ: ಕರೊನಾ COVID19 ಸೋಂಕು ಮತ್ತು ಅದಕ್ಕೆ ಸಂಬಂಧಿತ ವಿಷಯಗಳನ್ನು ಮುಂದಿಟ್ಟುಕೊಂಡು ಏಪ್ರಿಲ್ 1ರಂದು ಯಾರನ್ನೂ ಮೂರ್ಖರನ್ನಾಗಿ ಮಾಡಲು ಹೊರಡಬೇಡಿ. ಸಾಮಾಜಿಕ ಜಾಲತಾಣಗಳಲ್ಲೂ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಇದು ಮೂರ್ಖರನ್ನಾಗಿಸುವ ಸಂದರ್ಭವಲ್ಲ ಎಂದು ಮಹಾರಾಷ್ಟ್ರ ಪೊಲೀಸರು ಎಚ್ಚರಿಸಿದ್ದಾರೆ.
ಈ ಸಂಬಂಧ ಪುಣೆ ಗ್ರಾಮಾಂತರ ಪೊಲೀಸರು ಪ್ರಕಟಣೆಯನ್ನು ಹೊರಡಿಸಿದ್ದು, ಒಂದೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಏಪ್ರಿಲ್ ಒಂದು ಎಂದುಕೊಂಡು ಜನರನ್ನು ಮೂರ್ಖರನ್ನಾಗಿಸಲು ಸುಳ್ಳು ಸುದ್ದಿ ಹಬ್ಬಿಸಿದರೆ ಐಪಿಸಿ ಸೆಕ್ಷನ್ 188ರ ಪ್ರಕಾರ ಅಂಥ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸೆಕ್ಷನ್ 188ರ ಪ್ರಕಾರ, ಸರ್ಕಾರಿ ಅಧಿಕಾರಿ ಹೊರಡಿಸಿರುವ ಯಾವುದೇ ಆದೇಶವನ್ನು ಉಲ್ಲಂಘಿಸಿದರೆ ನೀಡಬಹುದಾದ ಶಿಕ್ಷೆಯ ವಿವರ ಇದರಲ್ಲಿದೆ. ಇದರಂತೆ, ಗರಿಷ್ಠ 6 ತಿಂಗಳು ಸಜೆ ಅಥವಾ 1,000 ರೂಪಾಯಿ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ.
ಸಾಮಾನ್ಯವಾಗಿ ಏಪ್ರಿಲ್ 1ರಂದು ಜನ ತಮ್ಮ ಸ್ನೇಹಿತರು, ಕುಟುಂಬ ವರ್ಗವನ್ನು ಮೂರ್ಖರನ್ನಾಗಿಸುವುದು ವಾಡಿಕೆ. ಇಂಥ ಆಟಗಳು ಈ ಸಂದರ್ಭದಲ್ಲಿ ಅತಿರೇಕಕ್ಕೆ ಹೋಗುವ ಸಾಧ್ಯತೆ ಇದೆ. ಹೀಗಾಗಿ ಈ ಬಾರಿ ಅದಕ್ಕೆ ಅವಕಾಶವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್)
ವಾವ್… ನನ್ನ ಟೀ-ಶರ್ಟ್ ಮೇಲೇಕೆ ನಿಮ್ಮ ಲುಕ್ : ಸನ್ನಿ ಲಿಯೋನ್ ಅವರ ಒಗಟಿನ ಮಾತಿಗೂ ಲಾಕ್ಡೌನ್ಗೂ ಇದೆ ಲಿಂಕ್!