ರಾಮನಗರ: ಕನಕಪುರದಲ್ಲಿ ವೈದ್ಯ ದಂಪತಿಗೆ ಸೋಂಕು ದೃಢಪಟ್ಟಿದ್ದು, ಇಡೀ ಜಿಲ್ಲೆಯನ್ನೇ ತಲ್ಲಣಗೊಳಿಸಿದೆ. ಇವರ ಬಳಿ ಚಿಕಿತ್ಸೆ ಪಡೆದ ನೂರಾರು ಮಂದಿಗೆ ಸೋಂಕಿನ ಭೀತಿ ಆವರಿಸಿದೆ.
ಸೋಂಕಿತ ವೈದ್ಯೆ ಸ್ತ್ರೀರೋಗ ತಜ್ಞರಾಗಿದ್ದು, ಇವರ ಬಳಿ ಗರ್ಭಿಣಿಯರೇ ಹೆಚ್ಚಾಗಿ ಚಿಕಿತ್ಸೆಗೆ ಆಗಮಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ. ಗುರುವಾರದ ಸಂಜೆ ಹೊತ್ತಿಗೆ ಖಾಸಗಿ ಆಸ್ಪತ್ರೆ ಸಿಬ್ಬಂದಿ, ವೈದ್ಯರ ಕುಟುಂಬ ಸದಸ್ಯರು ಹಾಗೂ ಚಿಕಿತ್ಸೆ ಪಡೆದ ರೋಗಿಗಳು ಸೇರಿ ಒಟ್ಟು 507 ಮಂದಿಯನ್ನು ಪತ್ತೆ ಹಚ್ಚಲಾಗಿದ್ದು, ಇವರಲ್ಲಿ 27 ಮಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಇದನ್ನೂ ಓದಿರಿ ಬಿಜೆಪಿ ಕಚೇರಿಯಲ್ಲಿ ಆರ್.ಶಂಕರ್ ಗಳಗಳನೇ ಅತ್ತಿದ್ದೇಕೆ?
ಸೋಮವಾರ 90 ವರ್ಷದ ವೃದ್ಧರೊಬ್ಬರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದರು. ಸಾವಿಗೂ ಮುನ್ನ ವೃದ್ಧರು ಕನಕಪುರದ ಎಂ.ಜಿ. ರಸ್ತೆಯಲ್ಲಿರುವ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯ ದಂಪತಿಯನ್ನು ಕ್ವಾರಂಟೈನ್ ಮಾಡಿ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಇದೀಗ ದಂಪತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದಲ್ಲದೆ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದು, ಕ್ವಾರಂಟೈನ್ಗೆ ಒಳಗಾಗಿದ್ದ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮತ್ತೊಂದೆಡೆ ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಕನಕಪುರ ನಗರಸಭೆ, ಜೂ.6ರಿಂದ ಇಲ್ಲಿಯವರೆಗೆ ಈ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದಿರುವ ಎಲ್ಲರೂ ಸ್ವಯಂಪ್ರೇರಿತರಾಗಿ ಕ್ವಾರಂಟೈನ್ಗೆ ಒಳಗಾಗಬೇಕು ಹಾಗೂ ಚಿಕಿತ್ಸೆ ಪಡೆಯಬೇಕು ಎಂದು ಸೂಚಿಸಿದೆ.
ಇದನ್ನೂ ಓದಿರಿ ಇಂಚರ ಗೋವಿಂದರಾಜುಗೆ ಜೆಡಿಎಸ್ ಟಿಕೆಟ್ ಕೊಟ್ಟಿದ್ದರ ಹಿಂದಿದೆ ಮಾಸ್ಟರ್ ಪ್ಲ್ಯಾನ್…
ಜಿಲ್ಲೆಯಲ್ಲಿ ಗುರುವಾರ ವೈದ್ಯ ದಂಪತಿ ಸೇರಿ 9 ಮಂದಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಪೈಕಿ ಮಾಗಡಿಯಲ್ಲಿ 4 ಮತ್ತು ಕನಕಪುರದಲ್ಲಿ 5 ಪ್ರಕರಣ. ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿದೆ.
ಮಾಗಡಿಯಲ್ಲಿ ಸೋಂಕು ದೃಢಪಟ್ಟಿದ್ದ ಮೆಕಾನಿಕ್ನ ಸಂಪರ್ಕದಲ್ಲಿದ್ದ ಕುಟುಂಬದ ನಾಲ್ವರು ಸದಸ್ಯರಲ್ಲೂ ಕರೊನಾ ಪತ್ತೆಯಾಗಿದೆ. ಮೆಕಾನಿಕ್ನ ತಂದೆ, ತಾಯಿ, ಹೆಂಡತಿ ಮತ್ತು ಮಗುವಿಗೆ ಸೋಂಕು ದೃಢಪಟ್ಟಿದ್ದು, ಎಲ್ಲರನ್ನೂ ರಾಮನಗರದ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿರಿ ನಾಲ್ವರನ್ನು ಪರಿಷತ್ ಅಖಾಡಕ್ಕಿಳಿಸಿದ ಬಿಜೆಪಿ, ಕಟೀಲ್ರಿಂದ ಗುರುವಿನ ಗುಣಗಾನ
ನಾಲ್ವರನ್ನು ಪರಿಷತ್ ಅಖಾಡಕ್ಕಿಳಿಸಿದ ಬಿಜೆಪಿ, ಕಟೀಲ್ರಿಂದ ಗುರುವಿನ ಗುಣಗಾನ