ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕರೊನಾ ಸೋಂಕು 248 ಹೊಸದಾಗಿ ಪತ್ತೆಯಾಗುವ ಮೂಲಕ, ಸೋಂಕಿತರ ಸಂಖ್ಯೆ 2781ಕ್ಕೆ ಏರಿದೆ. ಇವರ ಪೈಕಿ ಅಂತರರಾಜ್ಯ ಪ್ರಯಾಣಿಕರ ಸಂಖ್ಯೆ 227.
ಈ ಪೈಕಿ 894 ಮಂದಿ ಬಿಡುಗಡೆಗೊಂಡಿದ್ದು, 1837 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 50 ವರ್ಷದ ಚಿಕ್ಕಬಳ್ಳಾಪುರದ ಮಹಿಳೆಗೆ ಕರೊನಾ ಸೋಂಕು ಪತ್ತೆಯಾಗಿದ್ದು ಅವರು ಇಂದು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕರೊನಾ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಕುರ್ಚಿಗೆ ಕರ್ನಾಟಕ ಬರೆಯಲಿದೆಯೇ ಇತಿಹಾಸ?
ಬೆಂಗಳೂರಿನಲ್ಲಿ 303 ಸೋಂಕಿತರು ಇಲ್ಲಿಯವರೆಗೆ ಪತ್ತೆಯಾಗಿದ್ದರೆ, ಮಂಡ್ಯದಲ್ಲಿ 257, ಕಲಬುರಗಿಯಲ್ಲಿ 251, ಯಾದಗಿರಿಯಲ್ಲಿ 223, ಉಡುಪಿಯಲ್ಲಿ 164, ದಾವಣಗೆರೆಯಲ್ಲಿ 146, ಬೆಳಗಾವಿಯಲ್ಲಿ 146, ಹಾಸನದಲ್ಲಿ 144, ಚಿಕ್ಕಬಳ್ಳಾಪುರದಲ್ಲಿ 136. ರಾಯಚೂರಿನಲ್ಲಿ 134, ಬೀದರ್ನಲ್ಲಿ 120 ಸೋಂಕಿತರು ಇದುವರೆಗೆ ಪತ್ತೆಯಾಗುವ ಮೂಲಕ ಒಟ್ಟಾರೆ 11 ಜಿಲ್ಲೆಗಳಲ್ಲಿ ಸೋಂಕು ಶತಕ ಮೀರಿದೆ.
ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯವರೆಗೆ ಸೋಂಕು ಪತ್ತೆಯಾದವರ ಪಟ್ಟಿ ಇಂತಿದೆ:
ರಾಯಚೂರು 62, ಕಲಬುರ್ಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು: 12; ದಾವಣಗೆರೆ 4, ಹಾಸನ 4, ಚಿಕ್ಕಬಳ್ಳಾಪುರ 5, ವಿಜಯಪುರ 4, ಮೈಸೂರು 2, ಬಳ್ಳಾರಿ 9, ತುಮಕೂರು 2, ಚಿಕ್ಕಮಗಳೂರು 2, ಧಾರವಾಡ, ಚಿತ್ರದುರ್ಗ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.
ಇದನ್ನೂ ಓದಿ VIDEO: ರಾತ್ರೋರಾತ್ರಿ ಈ 76ರ ಅಜ್ಜಿ ರಾಕಿಂಗ್ ಸ್ಟಾರ್ ಆದದ್ದೇಕೆ?
ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಸಂಪೂರ್ಣ ವಿವರ ಇಲ್ಲಿದೆ: