More

    ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರೊನಾ, ನಟ ದರ್ಶನ್​ ಅಭಿಮಾನಿಗಳಿಗೂ ಆತಂಕ

    ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೂ ಕರೊನಾ ಸೋಂಕು ದೃಢಪಟ್ಟಿದ್ದು, ರೋಗ ಲಕ್ಷಣಗಳಿಲ್ಲದ ಕಾರಣ ಹೋಂ ಐಸೋಲೇಷನ್‌ಗೆ ಒಳಗಾಗಿದ್ದಾರೆ.

    ಕರೊನಾ ತಗುಲಿರುವ ಬಗ್ಗೆ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿನಯ್​ ಕುಲಕರ್ಣಿ, ‘ಕ್ಷೇತ್ರದ ಅಭಿವೃದ್ಧಿ ಕಾರ್ಯ ಮತ್ತು ಕರೊನಾ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ತೊಡಗಿದ್ದೆ. ಹಾಗಾಗಿ ಸೋಂಕು ತಗುಲಿರುವ ಶಂಕೆ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ವರದಿಯು ಪಾಸಿಟಿವ್ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದೇನೆ’ ಎಂದು ವಿವರಿಸಿದ್ದಾರೆ.

    ಇದನ್ನೂ ಓದಿರಿ ಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್

    ‘ಆತಂಕಕ್ಕೆ ಕಾರಣ ಇಲ್ಲ, ನಾಡಿನ ಹಾಗೂ ಕ್ಷೇತ್ರದ ಜನರ ಪ್ರೀತಿ ಆಶೀರ್ವಾದದಿಂದ ಬೇಗ ಗುಣಮುಖನಾಗಿ ನಿಮ್ಮ ಸೇವೆಗೆ ಮರಳುತ್ತೇನೆ’ ಎಂದಿರುವ ವಿನಯ್​ ಕುಲಕರ್ಣಿ, ‘ಕಳೆದ ಕೆಲ ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು’ ಎಂದಿದ್ದಾರೆ.

    ಇತ್ತೀಚೆಗಷ್ಟೇ ಮೇಕೆ ಖರೀದಿಸಲೆಂದು ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರು ಧಾರವಾಡದಲ್ಲಿರುವ ವಿನಯ್​ ಕುಲಕರ್ಣಿ ಅವರ ಫಾರ್ಮ್ ಹೌಸ್​ಗೆ ಭೇಟಿ ನೀಡಿದ್ದರು. ಈ ವೇಳೆ ನೂರಾರು ಅಭಿಮಾನಿಗಳು ಉಪಸ್ಥಿತರಿದ್ದರು. ಇದೀಗ ಅವರಿಗೂ ಕರೊನಾ ಸೋಂಕಿನ ಭೀತಿ ಆವರಿಸಿದೆ.

    ಕನ್ನಡ ಕಿರುತೆರೆ ನಟಿಗೆ ವರದಕ್ಷಿಣೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

    ಕೋಲುಮಂಡೆ ವಿವಾದ: ರ‍್ಯಾಪರ್​ ಚಂದನ್ ಶೆಟ್ಟಿ ವಿರುದ್ಧ ದೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts