ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಂಡ್ಯದಲ್ಲಿ ಶುರುವಾಯ್ತು ಟೆನ್ಶನ್!

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಜಿಲ್ಲೆಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಮತ್ತು ಮಾಧ್ಯಮದವರಿಗೆ ಢವಢವ ಶುರುವಾಗಿದೆ. ಜು.31 ಮತ್ತು ಆ.1ರಂದು ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದರು. 31ರಂದು ಶ್ರೀರಂಗಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದ್ದರು. ಬಳಿಕ ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಎಚ್‌.ಬಿ.ರಾಮು ಸೇರಿದಂತೆ ಹಲವು ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ್ದರು. ಜತೆಗೆ ಪ್ರವಾಸಿಮಂದಿರದಲ್ಲಿಯೇ ಊಟ ಮುಗಿಸಿ ತೆರಳಿದ್ದರು. ಮರುದಿನ ಮತ್ತೆ ಶ್ರೀರಂಗಪಟ್ಟಣದ … Continue reading ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಮಂಡ್ಯದಲ್ಲಿ ಶುರುವಾಯ್ತು ಟೆನ್ಶನ್!