ರಾಯಚೂರು: ಹೊರ ರಾಜ್ಯದಿಂದ ಆಗಮಿಸಿದವರನ್ನು ಕ್ವಾರಂಟೈನ್ ಮಾಡಲಾಗಿದ್ದ ಕಟ್ಟಡಗಳಿಗೆ ಭದ್ರತೆಗೆ ನಿಯೋಜನೆಗೊಂಡಿದ್ದ ಮೂವರು ಪೇದೆಗಳಿಗೆ ಗುರುವಾರ ಕರೊನಾ ಪಾಸಿಟಿವ್ ದೃಢಪಟ್ಟಿದೆ.
ಇದನ್ನೂ ಓದಿರಿ ಮಿಸ್ಡ್ಕಾಲ್ನಲ್ಲಿ ಪರಿಚಯವಾದ ಯುವಕನೊಂದಿಗೆ ಹಾಸಿಗೆ ಹಂಚಿಕೊಂಡ ಗೃಹಿಣಿ… ಆಕೆ ಗಂಡ ಮಾಡಿದ್ದಾದರೂ ಏನು?
ನಗರದ ಪಶ್ಚಿಮ ಠಾಣೆಯ ಮೂವರು ಪೇದೆಗಳನ್ನು ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿನ ಕ್ವಾರಂಟೈನ್ಗೆ ಭದ್ರತೆ ನಿಯೋಜಿಸಲಾಗಿತ್ತು. ಆಂಧ್ರದಿಂದ ಆಗಮಿಸಿದವರನ್ನು ಈ ಕಟ್ಟಡದಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಇದರಲ್ಲಿದ್ದ ಐವರಿಗೆ ಕರೊನಾ ಸೋಂಕು ಪಾಸಿಟಿವ್ ಬಂದಿದೆ.
ಇದನ್ನೂ ಓದಿರಿ ಈ ಚಿತ್ರ ನೋಡಿ… ಗರ್ಭಿಣಿ ಆನೆಯ ದಾರುಣ ಸಾವಿಗೆ ಕಂಬನಿ ಮಿಡಿಯುತ್ತಿದೆ!
ಪೊಲೀಸ್ ಸಿಬ್ಬಂದಿಗೆ ನಡೆಸಲಾಗುತ್ತಿರುವ ಕೋವಿಡ್ ಪರಿಶೀಲನೆ ಸಂದರ್ಭ ಈ ಮೂವರು ಪೇದೆಗಳಿಗೂ ಸೋಂಕು ತಗುಲಿರುವುದು ಗೊತ್ತಾಗಿದೆ. ಮೂವರು ಠಾಣೆಗೆ ಬಂದು ಹೋಗಿರುವುದರಿಂದ ಠಾಣೆಯನ್ನು ಸೀಲ್ಡೌನ್ ಮಾಡಲಾಗುತ್ತಿದೆ.
ಇದನ್ನೂ ಓದಿರಿ ಮೃತ ಸ್ನೇಹಿತನ ಮನೆ ಕಟ್ಟಿ.. ಅಲ್ಲೇ 11ನೇ ದಿನದ ಕಾರ್ಯ ನೆರವೇರಿಸಿದ ಯುವಕರ ಸಾಹಸಗಾಥೆ ಇದು!