ವಿಜಯಪುರ: ಕರೊನಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಇಲ್ಲ ಸಲ್ಲದ ಮಾಹಿತಿ ಅಪ್ಲೋಡ್ ಮಾಡಿದ ನಿಡಗುಂದಿ ಪಟ್ಟಣದ ಯುವಕನಿಗೆ ತಹಸೀಲ್ದಾರ್ ಹಾಗೂ ದಂಡಾಧಿಕಾರಿ ಶಿವಲಿಂಗಪ್ರಭು ವಾಲಿ ಒಂದು ವಾರ ಕಾಲ ಪಟ್ಟಣದ ಸ್ವಚ್ಛತಾ ಕಾರ್ಯಕ್ಕೆ ನಿಯೋಜಿಸಿ ಆದೇಶಿಸಿದ್ದಾರೆ.
ಪಟ್ಟಣದ ಪ್ರಕಾಶ ಹನುಮಂತ ಚಳ್ಳಮರದ (24) ದಂಡನೆಗೊಳಗಾದ ವ್ಯಕ್ತಿ. ಈತ ಕರೊನಾ ಬಗ್ಗೆ ಇಲ್ಲ ಸಲ್ಲದ ಸುದ್ದಿ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಾಮರಸ್ಯ ಹಾಗೂ ಶಾಂತಿ ಭಂಗ ಮಾಡುತ್ತಿದ್ದ. ಈತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟಣದ ಪಿಎಸ್ಐ ಚಂದ್ರಶೇಖರ ಚಿಕ್ಕೋಡಿ ತಹಸೀಲ್ದಾರ್ ವಾಲಿ ಅವರಿಗೆ ಮನವಿ ಸಲ್ಲಿಸಿದ್ದರು.
ಮನವಿ ಆಲಿಸಿದ ತಹಸೀಲ್ದಾರ್ ವಾಲಿ ಅವರು ಪ್ರಕಾಶ ಚಳ್ಳಮರದನಿಗೆ ಏ. 30ರಿಂದ ಮೇ 5ರವರೆಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸ್ವಚ್ಛತಾ ಕೆಲಸಗಳನ್ನು ಮಾಡಿಸಲು ಪ.ಪಂ. ಮುಖ್ಯಾಧಿಕಾರಿಗೆ ಒಪ್ಪಿಸಿ ಆದೇಶಿಸಿದ್ದಾರೆ. ಮೇ 6ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಆದೇಶಿಸಿದ್ದಾರೆ.
ದುಡಿದ ಹಣವನ್ನೆಲ್ಲ ದೇವಸ್ಥಾನಕ್ಕೆ ನೀಡುತ್ತಿದ್ದ ಈ ವ್ಯಕ್ತಿ ನೆರೆಮನೆ ದಂಪತಿಯ ಕೊಲೆ ಮಾಡುವಷ್ಟು ಕೆಟ್ಟವನಾಗಿದ್ದೇಕೆ?