ಬೆಂಗಳೂರು: ಮಹಾಮಾರಿ ಕರೊನಾ ವೈರಸ್ ಜಾಗತಿಕವಾಗಿ ಅಟ್ಟಹಾಸ ಮೆರೆಯುತ್ತಿದ್ದು ಎಲ್ಲೆಡೆ ಜನರು ಭಯಭೀತಗೊಂಡಿದ್ದಾರೆ. ಆರೋಗ್ಯ ಬಿಕ್ಕಟ್ಟಿನಂತಹ ಸಂದಿಗ್ಧ ಸಮಯದಲ್ಲಿ ರಾಜ್ಯದ ಜನರಿಗೆ ಸಾಂಕ್ರಮಿಕ ರೋಗದ ಬಗ್ಗೆ ಅರಿವು ಮೂಡಿಸಲು ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ಆಯೋಜಿಸಿದ್ದ ಫೋನ್ಇನ್ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ(ಸಾಂಕ್ರಾಮಿಕ ರೋಗಿಗಳ ವಿಭಾಗ) ಜಂಟಿ ನಿರ್ದೇಶಕ , ಕೋವಿಡ್ 19 ನೋಡಲ್ ಅಧಿಕಾರಿ ಡಾ.ಬಿ.ಜಿ. ಪ್ರಕಾಶ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ ಷರೀಫ್ ಅವರು ಭಾಗವಹಿಸಿ ಜನರ ಗೊಂದಲಗಳನ್ನು ಪರಿಹರಿಸಿದರು.
ಪಾಸಿಟಿವ್ ಕೇಸ್ ಬಂದ ಏರಿಯಾವನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿ ಸಂಪೂರ್ಣ ಲಾಕ್ಡೌನ್ ಮಾಡುತ್ತೇವೆ. ಅಲ್ಲಿ ಪ್ರವೇಶ ಮತ್ತು ನಿರ್ಗಮನ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ. ಪ್ರವೇಶ ದ್ವಾರದಲ್ಲಿ ಪೊಲೀಸ್ ಮತ್ತು ಆರೋಗ್ಯ ಇಲಾಖೆಯವರು ಒಳಹೋಗುವವರನ್ನು ಪರೀಕ್ಷಿಸಿ, ಪರಿಶೀಲಿಸಿಯೇ ಒಳಬಿಡುತ್ತಾರೆ ಎನ್ನವ ಮೂಲಕ ಕರೆದಾರರೊಬ್ಬರ ಗೊಂದಲಕ್ಕೆ ಪ್ರಕಾಶ್ ಕುಮಾರ್ ತೆರೆ ಎಳೆದರು. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಾರ್ವಜನಿಕರ ಜವಾಬ್ದಾರಿ ಎಂದರು.
ಹೀಗೆ ಸಾಕಷ್ಟು ಮಂದಿ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಗೊಂದಲಗಳನ್ನು ಬಗೆಹರಿಸಿಕೊಂಡರು. ಇದರೊಂದಿಗೆ ರಾಜ್ಯದಲ್ಲಿ ಕರೊನಾ ಪರಿಸ್ಥಿತಿ ಹೇಗಿದೆ? ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಹಾಗೂ ಸೋಂಕು ನಿಂಯತ್ರಂಣಕ್ಕೆ ಆರೋಗ್ಯ ಇಲಾಖೆ ಯಾವೆಲ್ಲಾ ಕ್ರಮಕೈಗೊಂಡಿದೆ? ಜನರು ಏನೇನು ಮಾಡಬೇಕು? ಎಂಬುದರ ಬಗ್ಗೆ ಪ್ರಕಾಶ್ ಕುಮಾರ್ ಅವರು ವಿವರಣೆ ನೀಡಿದ್ದು, ಈ ಎಲ್ಲಾ ಉಪಯುಕ್ತ ಮಾಹಿತಿ ನಾಳಿನ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಲಿದೆ.
ವಿಜಯವಾಣಿ ಫೋನ್ಇನ್ನಲ್ಲಿ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಿಂದ ಉಪಯುಕ್ತ ಮಾಹಿತಿ
ಬೆಂಗಳೂರು: ಮಹಾಮಾರಿ ಕರೊನಾ ವೈರಸ್ ಜಾಗತಿಕವಾಗಿ ಅಟ್ಟಹಾಸ ಮೆರೆಯುತ್ತಿದ್ದು ಎಲ್ಲೆಡೆ ಜನರು ಭಯಭೀತಗೊಂಡಿದ್ದಾರೆ. ಆರೋಗ್ಯ ಬಿಕ್ಕಟ್ಟಿನಂತಹ ಸಂದಿಗ್ಧ ಸಮಯದಲ್ಲಿ ರಾಜ್ಯದ ಜನರಿಗೆ ಸಾಂಕ್ರಮಿಕ ರೋಗದ ಬಗ್ಗೆ ಅರಿವು ಮೂಡಿಸಲು ರಾಜ್ಯದ ನಂ.1 ದಿನಪತ್ರಿಕೆ ವಿಜಯವಾಣಿ ಆಯೋಜಿಸಿದ್ದ ಫೋನ್ಇನ್ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ(ಸಾಂಕ್ರಾಮಿಕ ರೋಗಿಗಳ ವಿಭಾಗ) ಜಂಟಿ ನಿರ್ದೇಶಕ , ಕೋವಿಡ್ 19 ನೋಡಲ್ ಅಧಿಕಾರಿ ಡಾ.ಬಿ.ಜಿ. ಪ್ರಕಾಶ್ ಕುಮಾರ್ ಭಾಗವಹಿಸಿ ಜನರ ಗೊಂದಲಗಳನ್ನು ಪರಿಹರಿಸಿದರು.ಕಾರ್ಯಕ್ರಮದ ಸಮಗ್ರ ಮಾಹಿತಿ ನಾಳಿನ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾಗಲಿದೆ#Coronavirus #Covid19 #HealthDept #BGPrakashKumar #PhoneInPragram #Vijayavani
Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶನಿವಾರ, ಏಪ್ರಿಲ್ 25, 2020