ಕಲಬುರಗಿ: ಕರೊನಾ ವೈರಸ್ನಿಂದ ವೃದ್ಧರೊಬ್ಬರು ಮೃತಪಟ್ಟಿರುವುದು ದೃಢವಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಶರತ್. ಬಿ ಗುರುವಾರ ರಾತ್ರಿ ಸ್ಪಷ್ಟನೆ ನೀಡಿದ್ದಾರೆ. ಇದು ಕರ್ನಾಟಕ ಮಾತ್ರವಲ್ಲದೆ, ಭಾರತದಲ್ಲೇ ಮೊದಲ ಪ್ರಕರಣವಾಗಿದೆ.
ಕಲಬುರಗಿ ನಗರದ ನಿವಾಸಿ ಮಹಮ್ಮದ್ ಹುಸೇನ್ ಸಿದ್ದಿಕಿ ( 76) ಮೃತ. ಹೈದರಾಬಾದ್ ಆಸ್ಪತ್ರೆಯಲ್ಲಿ ಮಂಗಳವಾರ ಸಾವಿಗೀಡಾಗಿದ್ದರು.
ದುಬೈನಿಂದ ಆಗಮಿಸಿದ್ದ ಸಿದ್ದಿಕಿ ಕೆಮ್ಮಿನಿಂದ ಬಳಲುತ್ತಿದ್ದರು. ಮೊದಲು ಕಲಬುರಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅಲ್ಲಿಂದ ಅವರನ್ನು ಹೈದರಾಬಾದ್ಗೆ ಕರೆದುಕೊಂಡು ಹೋಗಲಾಗಿತ್ತು.
ಈ ಕುರಿತು ಸಚಿವ ಶ್ರೀರಾಮುಲು ಅವರು ಟ್ವೀಟ್ ಮಾಡಿ, ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ #COVID19 ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಲು ನಿಗಾವಹಿಸಲಾಗಿದೆ ಎಂದಯ ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಮೊನ್ನೆ ಮೃತಪಟ್ಟ 76 ವರ್ಷದ #COVID19 ಶಂಕಿತರಿಗೆ ಸೋಂಕು ತಗಲಿದ್ದು ಖಚಿತವಾಗಿದೆ. ಇವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಗುರುತಿಸಿ ಪ್ರತ್ಯೇಕವಾಗಿರಿಸಿ ನಿಗಾವಹಿಸಲಾಗಿದೆ.
— B Sriramulu (@sriramulubjp) March 12, 2020
VIDEO| ಕರೊನಾ ಭೀತಿ: ಇಟಲಿಯಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಸಚಿವ ಶ್ರೀರಾಮುಲು