ಬೆಂಗಳೂರು: ಮಹಾಮಾರಿ ಕರೊನಾ ವೈರಸ್ ತಡೆಗಟ್ಟಲು ರಾಜ್ಯದಲ್ಲಿ ಲಾಕ್ಡೌನ್ ಹೇರಲಾಗಿದೆ. ಈ ಮಧ್ಯೆಯೂ ನೆರವೇರಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಮದುವೆ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಚ್ಡಿಕೆ ಪರ ಬ್ಯಾಟ್ ಬೀಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ನಿಖಿಲ್-ರೇವತಿ ಮದುವೆ ವಿಚಾರ ಪ್ರಸ್ತಾಪಿಸಿ, ಅನುಮತಿಯನ್ನು ಪಡೆದೇ ವಿವಾಹ ಮಾಡಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ನಿಯಮದ ಪ್ರಕಾರವೇ ಕಡಿಮೆ ಜನರನ್ನು ಸೇರಿಸಿ ಮದುವೆ ಕಾರ್ಯ ನಡೆಸಿದ್ದು, ಅವರಿಗೆ ಧನ್ಯವಾದ ತಿಳಿಸುತ್ತೇನೆಂದರು.
ನಿನ್ನೆಯಷ್ಟೇ ರಾಮನಗರದ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಎಚ್ಡಿಕೆ ಪುತ್ರ ನಿಖಿಲ್ ಅವರು ರೇವತಿಯನ್ನು ವರಿಸಿದರು. ಮದುವೆಯಲ್ಲಿ ಕರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸಿದರೂ ಕೂಡ ಕೆಲ ಸಂದರ್ಭದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿದೇ ಇರುವುದು ಕಂಡುಬಂದಿದ್ದು, ತೀವ್ರ ಟೀಕೆಗೆ ಗುರಿಯಾಗಿತ್ತು. ರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು.
ರಾಮನಗರದಲ್ಲಿ ನಿಖಿಲ್-ರೇವತಿ ಅದ್ದೂರಿ ವಿವಾಹ: ಲಾಕ್ಡೌನ್ ನಿಯಮಗಳ ಉಲ್ಲಂಘನೆ ಆರೋಪ