More

    ಲಾಕ್​ಡೌನ್​ ನಡುವೆಯೂ ನಿಖಿಲ್​-ರೇವತಿ ವಿವಾಹ: ಮಾಜಿ ಸಿಎಂ ಎಚ್​ಡಿಕೆ ಪರ ಬ್ಯಾಟ್​ ಬೀಸಿದ ಸಿಎಂ ಬಿಎಸ್​ವೈ

    ಬೆಂಗಳೂರು: ಮಹಾಮಾರಿ ಕರೊನಾ ವೈರಸ್​ ತಡೆಗಟ್ಟಲು ರಾಜ್ಯದಲ್ಲಿ ಲಾಕ್​ಡೌನ್​ ಹೇರಲಾಗಿದೆ. ಈ ಮಧ್ಯೆಯೂ ನೆರವೇರಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್​ ಮದುವೆ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಎಚ್​ಡಿಕೆ ಪರ ಬ್ಯಾಟ್​ ಬೀಸಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ನಿಖಿಲ್​-ರೇವತಿ ಮದುವೆ ವಿಚಾರ ಪ್ರಸ್ತಾಪಿಸಿ, ಅನುಮತಿಯನ್ನು ಪಡೆದೇ ವಿವಾಹ ಮಾಡಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ನಿಯಮದ ಪ್ರಕಾರವೇ ಕಡಿಮೆ ಜನರನ್ನು ಸೇರಿಸಿ ಮದುವೆ ಕಾರ್ಯ ನಡೆಸಿದ್ದು, ಅವರಿಗೆ ಧನ್ಯವಾದ ತಿಳಿಸುತ್ತೇನೆಂದರು.

    ನಿನ್ನೆಯಷ್ಟೇ ರಾಮನಗರದ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಎಚ್​ಡಿಕೆ ಪುತ್ರ ನಿಖಿಲ್ ಅವರು ರೇವತಿಯನ್ನು ವರಿಸಿದರು. ಮದುವೆಯಲ್ಲಿ ಕರೊನಾ ಮುಂಜಾಗ್ರತಾ ಕ್ರಮಗಳನ್ನು ಅನುಸಿದರೂ ಕೂಡ ಕೆಲ ಸಂದರ್ಭದಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸಿದೇ ಇರುವುದು ಕಂಡುಬಂದಿದ್ದು, ತೀವ್ರ ಟೀಕೆಗೆ ಗುರಿಯಾಗಿತ್ತು. ರಾಷ್ಟ್ರೀಯ ಮಾಧ್ಯಮಗಳಲ್ಲೂ ಈ ಬಗ್ಗೆ ಚರ್ಚೆಯಾಗಿತ್ತು.

    ರಾಮನಗರದಲ್ಲಿ ನಿಖಿಲ್-ರೇವತಿ ಅದ್ದೂರಿ ವಿವಾಹ: ಲಾಕ್‌ಡೌನ್ ನಿಯಮಗಳ ಉಲ್ಲಂಘನೆ ಆರೋಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts