More

    ಸಚಿವರನ್ನು ಕಾಡಲಾರಂಭಿಸಿದ ಕರೊನಾ ಆತಂಕ: ಬೊಮ್ಮಾಯಿ, ಸುಧಾಕರ್​, ಡಿಸಿಎಂ, ಸ್ವಯಂ ಕ್ವಾರಂಟೈನ್

    ಬೆಂಗಳೂರು: ಕರೊನಾವೈರಸ್ ಆತಂಕ ಸಚಿವರನ್ನು ಕಾಡಲಾರಂಭಿಸಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್​ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

    ರಾಮನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವತ್ಥನಾರಾಯಣ, ಖಾಸಗಿ ವಾಹಿನಿ ಕ್ಯಾಮರಾಮನ್​ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಈಗ ಆ ಕ್ಯಾಮರಾಮೆನ್​ಗೆ ಪಾಸಿಟಿವ್ ಬಂದಿರುವುದರಿಂದ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

    ಈಗಾಗಲೆ ಒಮ್ಮೆ ಕರೊನಾ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ಬಂದಿದೆ. ಆದರೂ ಮತ್ತೊಮ್ಮೆ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕರೊನಾ ಪರೀಕ್ಷೆಗೆ ಒಳಗಾಗಿದ್ದು, ಅವರ ವರದಿಯೂ ನೆಗೆಟಿವ್ ಬಂದಿದೆ. ಆದರೂ ಅವರು ಕ್ವಾರಂಟೈನ್​ಗೆ ಒಳಪಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.

    ನಿಖಿಲ್ ಮದುವೆಗೆ ನೀಡಿದ ಪಾಸ್ ಕುರಿತು ಇನ್ನೂ ಏಕೆ ವರದಿ ಸಲ್ಲಿಸಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts