ಬೆಂಗಳೂರು: ಕರೊನಾವೈರಸ್ ಆತಂಕ ಸಚಿವರನ್ನು ಕಾಡಲಾರಂಭಿಸಿದ್ದು, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಸ್ವಯಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ರಾಮನಗರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವತ್ಥನಾರಾಯಣ, ಖಾಸಗಿ ವಾಹಿನಿ ಕ್ಯಾಮರಾಮನ್ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಈಗ ಆ ಕ್ಯಾಮರಾಮೆನ್ಗೆ ಪಾಸಿಟಿವ್ ಬಂದಿರುವುದರಿಂದ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಈಗಾಗಲೆ ಒಮ್ಮೆ ಕರೊನಾ ಪರೀಕ್ಷೆ ಮಾಡಿಸಿದ್ದು, ನೆಗೆಟಿವ್ ಬಂದಿದೆ. ಆದರೂ ಮತ್ತೊಮ್ಮೆ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಕರೊನಾ ಪರೀಕ್ಷೆಗೆ ಒಳಗಾಗಿದ್ದು, ಅವರ ವರದಿಯೂ ನೆಗೆಟಿವ್ ಬಂದಿದೆ. ಆದರೂ ಅವರು ಕ್ವಾರಂಟೈನ್ಗೆ ಒಳಪಡಬೇಕು ಎಂಬ ಒತ್ತಾಯಗಳು ಕೇಳಿಬಂದಿವೆ.
I have taken a swab test and it has come negative. I am under self quarantine and I am healthy.#Covid19
ನಾನು ಕೋವಿಡ್-19 ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು ಅದು ನೆಗೆಟಿವ್ ಬಂದಿರುತ್ತದೆ, ನಾನು ಆರೋಗ್ಯದಿಂದಿದ್ದು, ಸ್ವತಃ ಕ್ವಾರೆಂಟೈನ್ ಗೆ ಒಳಗಾಗಿದ್ದೇನೆ.
— Basavaraj S Bommai (@BSBommai) April 29, 2020
ಕೋವಿಡ್19 ಪಾಸಿಟಿವ್ ಬಂದಿರುವ ಟಿವಿ ಪತ್ರಕರ್ತರ ಜೊತೆ ನಾನು ಕೂಡ ಸಂಪರ್ಕಕ್ಕೆ ಬಂದಿರುವ ವಿಷಯ ಗೊತ್ತಾದ ಹಿನ್ನಲೆಯಲ್ಲಿ, ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ, ನೆಗೆಟಿವ್ ಬಂದಿದೆ. ಹಾಗಿದ್ದರೂ, ಮುನ್ನೆಚ್ಚರಿಕೆಯಿಂದ 7 ದಿನ ನನ್ನ ಮನೆಯಲ್ಲೆ ಕ್ವಾರಂಟೈನ್ ನಲ್ಲಿರಲು ನಿರ್ಧರಿಸಿದ್ದೇನೆ, ಅಲ್ಲಿಂದಲೇ ಕರ್ತವ್ಯವನ್ನು ನಿರ್ವಹಿಸುತ್ತೇನೆ.
— Dr Sudhakar K (@mla_sudhakar) April 29, 2020
ನಿಖಿಲ್ ಮದುವೆಗೆ ನೀಡಿದ ಪಾಸ್ ಕುರಿತು ಇನ್ನೂ ಏಕೆ ವರದಿ ಸಲ್ಲಿಸಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ