ಭ್ರಷ್ಟಾಚಾರ ಆರೋಪದಲ್ಲಿ ಸಿಕ್ಕಿಬಿದ್ದ ತಹಸೀಲ್ದಾರ್​; ಆತ್ಮಹತ್ಯೆ ಮಾಡಿಕೊಂಡ ಚಾಲಕ!

ಚಿಕ್ಕಮಗಳೂರು: ಭ್ರಷ್ಟಾಚಾರ ಆರೋಪದಲ್ಲಿ ತಹಸೀಲ್ದಾರ್ ಎಸಿಬಿ ಬಲೆಗೆ ಸಿಕ್ಕಿಹಾಕಿಕೊಂಡು ಜೈಲುಪಾಲಾಗಿದ್ದರೆ, ಮತ್ತೊಂದೆಡೆ ಅವರ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಹಸೀಲ್ದಾರ್ ಅವರ ಚಾಲಕ ವಿಜೇತ್​ (26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ನಿವಾಸಿಯಾಗಿದ್ದ ವಿಜೇತ್​ ಮನೆಯ ಸಮೀಪದ ಅಡಿಕೆ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಶೃಂಗೇರಿ ತಹಸೀಲ್ದಾರ್​ ಅಂಬುಜಾ ಅವರ ಕಾರು ಚಾಲಕನಾಗಿದ್ದ. ತಹಸೀಲ್ದಾರ್ ಅಂಬುಜಾ ಜ.6ರಂದು ಎಸಿಬಿ ಬಲೆಗೆ ಬಿದ್ದಿದ್ದರು. ಇವರು ಬೋಗಸ್ ಹಕ್ಕುಪತ್ರ ನೀಡಿ ವಂಚಿಸಿದ್ದ ಆರೋಪದ ಮೇಲೆ … Continue reading ಭ್ರಷ್ಟಾಚಾರ ಆರೋಪದಲ್ಲಿ ಸಿಕ್ಕಿಬಿದ್ದ ತಹಸೀಲ್ದಾರ್​; ಆತ್ಮಹತ್ಯೆ ಮಾಡಿಕೊಂಡ ಚಾಲಕ!