ಚಂಡಿಘಢ: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಗ್ಯ ಸಚಿವನನ್ನು ಮುಖ್ಯಮಂತ್ರಿ ಭಗವಂತ ಮಾನ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ನ ಆರೋಗ್ಯ ಸಚಿವರಾಗಿದ್ದ ವಿಜಯ್ ಸಿಂಗ್ಲಾ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ವಜಾಗೊಳಿಸಿದ್ದರು.
ಪ್ರತಿ ಟೆಂಡರ್ ಪಡೆಯುವಾಗಲೂ ಶೇ.1 ರಷ್ಟು ಕಮಿಷನ್ ಸಚಿವರಿಗೆ ಹೋಗಲೇ ಬೇಕಿತ್ತು. ಈ ಆರೋಪ ಕೇಳಿಬಂದದ್ದರಿಂದ ಸಿಎಂ ವಜಾಗೊಳಿಸಿದ್ದರು. ಇನ್ನು ಪಂಜಾಬ್ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಸಚಿವರನ್ನು ವಶಕ್ಕೆ ಪಡೆದಿದ್ದಾರೆ.
10 ದಿನಗಳ ಹಿಂದೆ ಮುಖ್ಯಮಂತ್ರಿಗೆ ಈ ಬಗ್ಗೆ ದೂರು ನೀಡಲಾಗಿತ್ತು. ದೇಶದಲ್ಲೇ ಮುಖ್ಯಮಂತ್ರಿಯೊಬ್ಬರು ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಂಡ 2ನೇ ಪ್ರಕರಣ ಇದಾಗಿದೆ. 2015ರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಸಹ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವನೊಬ್ಬನನ್ನು ವಜಾಗೊಳಿಸಿದ್ದರು.
ಮುಖ್ಯಮಂತ್ರಿಗೆ ದೂರು ಬಂದ ಹಿನ್ನಲೆಯಲ್ಲಿ ಪ್ರತ್ಯೇಕವಾಗಿ ತಂಡ ರಚಿಸಿ ಸಚಿವರ ಭ್ರಷ್ಟಾಚಾರವನ್ನು ಬಯಲಿಗೆಳೆಯಲಾಗಿತ್ತು. ಇದೀಗ ಅವರ ವಿರುದ್ಧ ಭ್ರಷ್ಟಾಚಾರ ನಡೆಸಿರುವುದು ನಿಖರ ಮಾಹಿತಿ ತಿಳಿದಿದ್ದರಿಂದ ಪೊಲೀಸರೇ ಸ್ವಯಂಪ್ರೇರಿತ ದೂರು ದಾಖಲಿಸಿ ಬಂಧಿಸಲಾಗಿದೆ. (ಏಜೆನ್ಸೀಸ್)
ನಿಂತಿದ್ದ ಅಟೋ ಮೇಲೆಯೇ ಬಿತ್ತು ಬೃಹತ್ ಗಾತ್ರದ ಮರ: ಇಬ್ಬರಿಗೆ ಗಂಭೀರ ಗಾಯ, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ