ಸಂಡೂರು: ಶಿಬಿರಾರ್ಥಿಗಳು ಮತ್ತು ಗ್ರಾಮಸ್ಥರ ನಡುವಿನ ಸಹಕಾರ ಮನೋಭಾವ, ಕಲಿಕೆ ಮತ್ತು ಅನುಭವಗಳ ಮುಖಾಂತರ ದೇಶದ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಪ್ರಮುಖವಾದದ್ದು ಎಂದು ತಹಶೀಲ್ದಾರ್ ಜಿ.ಅನಿಲ್ ಕುಮಾರ್ ತಿಳಿಸಿದರು.
ಇದನ್ನೂ ಓದಿ:http://ದೇಶ ಅಭಿವೃದ್ಧಿಯಲ್ಲಿ ಎನ್ಎಸ್ಎಸ್ ಪಾತ್ರ ಮಹತ್ವದ್ದು
ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರ ರಾಷ್ಟ್ರೀಯ ಸೇವಾ ಯೋಜನ 1-2 ಘಟಕ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ದತ್ತು ಗ್ರಾಮ ಅಂಕಮ್ಮನಹಾಳ್ ಗ್ರಾಮದಲ್ಲಿ ನಡೆದ 2023-24ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಶಿಬಿರದಲ್ಲಿ ಮಾತನಾಡಿದರು.
ಮಾನವ ಸಂಘ ಜೀವಿ ಆಗಿರುವುದರಿಂದ ಸಮಾಜದ ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯ. ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬೆಳೆವಣೆಗೆ ನಿರಂತರವಾದದ್ದು ಈಗಾಗಿ ಹೆಚ್ಚಿನ ಕಲಿಕೆಗೆ ಪ್ರಾಮುಖ್ಯತೆ ಕೊಡಿ ಎಂದರು.
ಘಟಕ 2ರ ವಿಶೇಷ ಅಧಿಕಾರಿ ಡಾ.ಕೆ.ಜಿ.ಸುಮಾ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸಮಾಜದೊಂದಿಗೆ ಬೆರೆಯುವ ಕೌಶಲ್ಯ, ಗ್ರಾಮೀಣ ಜನರ ಜೀವನ ಶೈಲಿ ಮೈಗೂಡಿಸಿಕೊಳ್ಳಲು ಪರಿಣಾಮಕಾರಿಯಾಗಲಿದೆ.