More

    ಕಾರು ಅಪಘಾತಕ್ಕೆ ದಂಪತಿ ಬಲಿ; ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಮಗನೂ ಇಂದು ಶವವಾಗಿ ಪತ್ತೆ!

    ರಾಯಚೂರು: ಗೌರಿ ಹಬ್ಬದಂದು ಕಾರು ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದ ದಂಪತಿಯ ಪುತ್ರ ಕಾಲುವೆಯ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇಂದು ಶವವಾಗಿ ಪತ್ತೆಯಾಗಿದ್ದಾನೆ. ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ಆ. 30ರಂದು ಈ ಅಪಘಾತ ಸಂಭವಿಸಿತ್ತು.

    ರಾಯಚೂರಿನ ಮಸ್ಕಿ ತಾಲೂಕಿನ ಗುಡದೂರು ಬಳಿ ನಡೆದಿದ್ದ ಅಪಘಾತದಲ್ಲಿ ಕಾರು ತುಂಗಭದ್ರಾ ಎಡದಂಡೆ ಕಾಲುವೆಗೆ ಬಿದ್ದಿತ್ತು. ಈ ಅಪಘಾತದಲ್ಲಿ ಸೂರ್ಯರಾವ್ (62), ಸುಬ್ಬಲಕ್ಷ್ಮೀ (58) ದಂಪತಿ ಅಂದು ಕಾರಿನಲ್ಲೇ ಮೃತಪಟ್ಟಿದ್ದರು. ಆದರೆ ಕಾರು ಚಲಾಯಿಸುತ್ತಿದ್ದ ಪುತ್ರ ಶ್ರೀನಿವಾಸ (38) ಅಂದು ಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದರು.

    ಇದನ್ನೂ ಓದಿ: ಗೌರಿ ಹಬ್ಬದ ದಿನವೇ ದುರಂತ: ಕಾಲುವೆಗೆ ಕಾರು ಬಿದ್ದು ದಂಪತಿ ಸಾವು, ನೀರಲ್ಲಿ ಕೊಚ್ಚಿಹೋದ ಮಗ

    ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಚ್ಚಿಹೋದ ಶ್ರೀನಿವಾಸ್​ಗಾಗಿ ಹುಡುಕಾಟ ನಡೆಸಿದ್ದರೂ ಪತ್ತೆ ಆಗಿರಲಿಲ್ಲ. ಆದರೆ ಇಂದು ಸಿರವಾರ ತಾಲೂಕಿನ ನವಲಕಲ್ ಬಳಿ ಶ್ರೀನಿವಾಸ್ ಶವ ಪತ್ತೆಯಾಗಿದೆ.

    ಇಂದಿನ ಯುವಕರಿಗೆ ಹೆಂಡತಿ ಎಂದರೆ ‘ಎಂದೆಂದಿಗೂ ಆಹ್ವಾನಿಸಲಾದ ಚಿಂತೆ’!; ಹೈಕೋರ್ಟ್​

    ಸಂಭಾವನೆ ಪಡೆಯದೆ ಪುಣ್ಯಕೋಟಿ ರಾಯಭಾರಿ ಆದ ಸುದೀಪ್​; ಕಿಚ್ಚನಿಗೆ ಸರ್ಕಾರದಿಂದಲೇ ಬರ್ತ್​ಡೇ ಗಿಫ್ಟ್​

    ವಿವಾದಕ್ಕೀಡಾಯ್ತು ಅಂಬೇಡ್ಕರ್ ಹೋಲಿಕೆಯ ಗಣೇಶ ಮೂರ್ತಿ ಪ್ರತಿಷ್ಠಾಪನೆ!; ದಲಿತರ 2 ಗುಂಪುಗಳ ಮಧ್ಯೆ ವಾಗ್ವಾದ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts