ಒಂದು ವರ್ಷದ ಮಗುವಿಗೆ ವಿಷ ಉಣಿಸಿ ಅಪ್ಪ-ಅಮ್ಮ ಆತ್ಮಹತ್ಯೆ; ‘ಮೂವರನ್ನೂ ಒಟ್ಟಿಗೇ ಮಣ್ಣು ಮಾಡಿ, ಖುಷಿಯಿಂದ ಕಳಿಸಿಕೊಡಿ..’

blank

ಮಂಡ್ಯ: ಒಂದು ವರ್ಷದ ಮಗುವಿಗೆ ವಿಷ ಉಣಿಸಿ ಅಪ್ಪ-ಅಮ್ಮ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆಯೊಂದು ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಈ ದುರಂತ ಪ್ರಕರಣ ನಡೆದಿದೆ.

ರಘು (28), ತನುಶ್ರೀ (24) ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಂಡ್ಯ ನಗರದ ರಘು, ಗಂಗವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ಮಗು ಹಾಗೂ ಪತಿ ಜತೆ ತನುಶ್ರೀ ತಂದೆಯ ಮನೆಗೆ ಬಂದಿದ್ದು, ಇಂದು ಮಗುವನ್ನು ಕೊಂದು ಇಬ್ಬರೂ ನೇಣಿಗೆ ಶರಣಾಗಿದ್ದಾರೆ.

ಇವರು ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದರೂ, ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ. ಆದರೆ ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್​ನೋಟ್​ ಬರೆದಿಟ್ಟಿದ್ದರು. ನಮ್ಮ ಸಾವಿಗೆ ಯಾರೂ ಕಾರಣವಲ್ಲ, ನಾವೇ ಕಾರಣ.. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್​ಫೋನ್​ನಲ್ಲಿ ಇರುವ ನಂಬರ್​ಗಳಿಗೆ ಕರೆ ಮಾಡಿ ತಿಳಿಸಿ ಎಂದೂ ಬರೆದಿದ್ದರು.

ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನೂ ಒಟ್ಟಿಗೇ ಮಣ್ಣು ಮಾಡಿ. ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂಬುದಾಗಿಯೂ ಡೆತ್​ನೋಟ್​ನಲ್ಲಿ ಬರೆದಿಡಲಾಗಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆ ವಿಚಾರ; ಕರೊನಾ ನಿಯಂತ್ರಣ ನಿಟ್ಟಿನಲ್ಲಿ ಸಿಎಂ ಮಹತ್ವದ ನಿರ್ಧಾರ

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…