ಮಕ್ಕಳಾಗಲಿ ಎಂದು ವಿಶೇಷ ಪೂಜೆ ಮಾಡಲಿಕ್ಕೆ ದೇವಸ್ಥಾನಗಳ ಮೂರ್ತಿಗಳನ್ನು ಕದ್ದ ದಂಪತಿ!; ಗಂಡ ಸಿಕ್ಕಿಬಿದ್ದರೂ ಹೆಂಡತಿ ಸಿಕ್ಕಿಲ್ಲ..

ಹೈದರಾಬಾದ್​: ಮದುವೆಯಾಗಿ ಬಹಳ ದಿನಗಳಾದರೂ ಮಕ್ಕಳಾಗಲಿಲ್ಲ ಎಂದರೆ ದಂಪತಿ ಏನೇನೋ ಪೂಜೆ-ಪುನಸ್ಕಾರ, ಹರಕೆಗಳನ್ನು ಕೈಗೊಳ್ಳುತ್ತಾರೆ. ಅದು ತಪ್ಪೇನೂ ಅಲ್ಲ. ಆದರೆ ಇಲ್ಲೊಂದು ದಂಪತಿ ಮಕ್ಕಳಾಗಲಿ ಎಂದು ವಿಶೇಷ ಪೂಜೆ ಮಾಡಲಿಕ್ಕಾಗಿ ದೇವಸ್ಥಾನಗಳ ಮೂರ್ತಿಗಳನ್ನೇ ಕದ್ದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತಪುರಂ ಸಿದ್ದೇಶ್ ಸಿಕ್ಕಿಬಿದ್ದಿದ್ದರೂ ಪತ್ನಿ ಎಸ್​. ಸುಜಾತಾ ಇನ್ನೂ ಪತ್ತೆಯಾಗಿಲ್ಲ. ಆದರೆ ಸಿಕ್ಕಿಹಾಕಿಕೊಂಡಿರುವ ಪತಿಯಿಂದ ಕದ್ದ ಮೂರ್ತಿಗಳನ್ನು ಹಾಗೂ ಮೊಬೈಲ್​ಫೋನೊಂದನ್ನು ವಶಪಡಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಪತ್ನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೈಕ್​ನಲ್ಲಿ ಹೋಗುವಾಗ ಪ್ರಿಯಕರನ ಬೆನ್ನಿಗೆ … Continue reading ಮಕ್ಕಳಾಗಲಿ ಎಂದು ವಿಶೇಷ ಪೂಜೆ ಮಾಡಲಿಕ್ಕೆ ದೇವಸ್ಥಾನಗಳ ಮೂರ್ತಿಗಳನ್ನು ಕದ್ದ ದಂಪತಿ!; ಗಂಡ ಸಿಕ್ಕಿಬಿದ್ದರೂ ಹೆಂಡತಿ ಸಿಕ್ಕಿಲ್ಲ..