ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ನಡೆಯಿತು. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಮತ್ತು ಎಸ್ಐಟಿ ಲಾಯರ್ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇದೀಗ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 11:30ಕ್ಕೆ ಮುಂದೂಡಿದೆ.
ಇದನ್ನೂ ಓದಿ: ಎಚ್.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ! ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್
ಒಂದೆಡೆ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಅವರ ಜಾಮೀನು ವಿಚಾರ ಕೋರ್ಟ್ನಲ್ಲಿ ನಡೆಯುತ್ತಿದೆ. ಇನ್ನು ರೇವಣ್ಣ ಪರ ನ್ಯಾಯಾಲಯದಲ್ಲಿ ವಾದ ಮಾಡುತ್ತಿರುವ ಹಿರಿಯ ವಕೀಲ ಸಿ.ವಿ. ನಾಗೇಶ್, 5 ದಿನವಾದರೂ ಏಕೆ ಮಹಿಳೆಯ ಹೇಳಿಕೆ ಪಡೆದಿಲ್ಲ. ಅಪಹರಣವಾಗಿದ್ದಾರೆ ಎಂದು ಹೇಳಲಾದ ಮಹಿಳೆ ಇಂದು ಆರೋಗ್ಯವಾಗಿ ಪತ್ತೆ ಎಂದು ವಾದಿಸಿದ್ದಾರೆ.
ಈ ಕೇಸ್ ದಾಖಲಿಸಿರುವುದೇ ಕಾನೂನುಬಾಹಿರ. ಏ.29ರಿಂದ ಮೇ 5 ರವರೆಗೆ ಆಕೆಗೆ ತೊಂದರೆಯಾಗಿಲ್ಲ. ನಿನ್ನೆಯಿಂದ ರೇವಣ್ಣ ಅವರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ, ಅದು ಅನಗತ್ಯ. ಈ ಸೆಕ್ಷನ್ಗಳು ರೇವಣ್ಣ ಅವರಿಗೆ ಅನ್ವಯವಾಗುವುದಿಲ್ಲ. ಮಹಿಳೆಯನ್ನು ಕರೆದೊಯ್ದು ವಾಹನಗಳನ್ನು ಪತ್ತೆಹಚ್ಚಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ರೇವಣ್ಣ ಪರ ವಾದ ಮಂಡಿಸಿದ್ದಾರೆ.
ಇಬ್ಬರ ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಇದೀಗ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ (ಮೇ.13) ಬೆಳಗ್ಗೆ 11:30ಕ್ಕೆ ಮುಂದೂಡಿದೆ.
ಧೋನಿ ಸಹ ಪಾಠ ಕಲಿಸಲು ಸಾಧ್ಯವಿಲ್ಲ… ಶಾಕಿಂಗ್ ಹೇಳಿಕೆ ನೀಡಿದ ಹಾರ್ದಿಕ್ ಪಾಂಡ್ಯ!