More

    ಮಂಗಳೂರು ಏರ್​ಪೋರ್ಟಲ್ಲಿ ಬಾಂಬ್ ಇಟ್ಟ ಪ್ರಕರಣ; ಆರೋಪಿ ಆದಿತ್ಯಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ..

    ಮಂಗಳೂರು: ಮಂಗಳೂರು ಏರ್​ಪೋರ್ಟ್​​ನಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್​ಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ.

    2020ರ ಜನವರಿ 20ರಂದು ಮಂಗಳೂರು ಏರ್​​ಪೋರ್ಟ್​ನಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ, ನಂತರ ಜನವರಿ 22ರಂದು ಬೆಂಗಳೂರಿನಲ್ಲಿ ಶರಣಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ಕೇಸ್​ ದಾಖಲಿಸಿಕೊಳ್ಳಲಾಗಿದ್ದು, ಒಂದರಲ್ಲಿ 20 ವರ್ಷ ಜೈಲು, 10 ಸಾವಿರ ರೂ. ದಂಡ ಹಾಗೂ ಇನ್ನೊಂದರಲ್ಲಿ 5 ವರ್ಷ ಜೈಲು, 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ.

    ಉಡುಪಿ‌ ಜಿಲ್ಲೆಯ ಮಣಿಪಾಲ ಮೂಲದ ಆದಿತ್ಯ ರಾವ್, ಮೆಕ್ಯಾನಿಕಲ್ ಇಂಜಿನಿಯರ್ ಪದವೀಧರನಾಗಿದ್ದು, 2018ರಲ್ಲಿ ಬೆಂಗಳೂರು ಏರ್​ಪೋರ್ಟ್​ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು. ಇದರ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದ ಆದಿತ್ಯ ರವ್, ಅನೇಕ ಬಾರಿ ಏರ್​ಪೋರ್ಟ್​​ಗೆ ಕರೆ ಮಾಡಿ ಬಾಂಬ್ ಇರಿಸಿದ್ದಾಗಿ ಹೇಳಿದ್ದ. ಹೀಗೆ ಹಲವು ಬಾರಿ ಹುಸಿ ಬಾಂಬ್ ಕರೆ ನೀಡಿದ್ದ ಈತ ಒಮ್ಮೆ ನಿಜವಾಗಿಯೂ ಬಾಂಬ್ ಇರಿಸಿದ್ದ. ಈ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿಯಾಗಿತ್ತು.

    ಗಂಡನ ಕತ್ತನ್ನು ಕತ್ತರಿಸಿದ ಹೆಂಡತಿ; ರುಂಡ ಚೀಲದಲ್ಲಿರಿಸಿ ದೇವಸ್ಥಾನದಲ್ಲಿಟ್ಟಳು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts