More

    ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡದ ಕೆಎಸ್​ಆರ್​ಟಿಸಿ ಅಧಿಕಾರಿಗಳು; 2 ಬಸ್​ಗಳನ್ನು ವಶಕ್ಕೆ ಪಡೆದ ಕೋರ್ಟ್​ ಸಿಬ್ಬಂದಿ

    ದಾವಣಗೆರೆ: ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಹೊಸಪೇಟೆ ವಿಭಾಗದ ಎರಡು ಕೆಎಸ್​ಆರ್​ಟಿಸಿ ಬಸ್​ಗಳನ್ನು ಸಿವಿಲ್ ನ್ಯಾಯಾಲಯ ವಶಕ್ಕೆ ಪಡೆದುಕೊಂಡಿದೆ.

    ದಾವಣಗೆರೆಯ ಕೆಟಿಜೆ ನಗರದ ನಿವಾಸಿ ಶ್ರೀಪತಿ ಎಂಬುವರು 2018ರಲ್ಲಿ ಬಸ್​ ಅಪಘಾತದಲ್ಲಿ ಮೃತಪಟ್ಟಿದ್ದರು. ಪರಿಹಾರಕ್ಕೆ ಕೋರಿ ಮೃತನ ಕುಟುಂಬದವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಪರಿಹಾರ ನೀಡುವಂತೆ ಕೋರ್ಟ್​ ಆದೇಶ ನೀಡಿದ್ದರೂ ಕೆಎಸ್​ಆರ್​ಟಿಸಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು.

    ಹೀಗಾಗಿ ಎರಡು ಕೆಎಸ್​ಆರ್​ಟಿಸಿ ಬಸ್​ಗಳನ್ನು ವಶಪಡಿಸಿಕೊಳ್ಳಲು ಹಿರಿಯ ಸಿವಿಲ್​ ನ್ಯಾಯಾಧೀಶ ವೈ.ಕೆ.ಬೇನಾಳ್​ ಆದೇಶ ನೀಡಿದ್ದಾರೆ. ಹೀಗಾಗಿ ಎರಡು ಬಸ್​ಗಳನ್ನು ಕೋರ್ಟ್​ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts