ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳುವ ಲೋಕಸಭಾ ಸದಸ್ಯರು ಕೋವಿಡ್ ಪರೀಕ್ಷೆಗೆ ಒಳಗೊಳ್ಳುವುದು ಕಡ್ಡಾಯವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ.
ಕಲಾಪಕ್ಕಾಗಿ ಸಂಸತ್ ಭವನದಲ್ಲಿ ಭಾರಿ ಬದಲಾವಣೆಗಳನ್ನು ಮಾಡಲಾಗಿದೆ. ಎಲ್ಲ ಸಂದರಿಗೂ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಲಾಗವುದು. ಇದರ ಫಲಿತಾಂಶ ಗೊತ್ತಾಗಲು 24- 48 ಗಂಟೆ ಬೇಕಾಗಲಿದೆ ಎಂದು ಸ್ಪೀಕರ್ ಮಾಹಿತಿ ನೀಡಿದರು. ಸಂಸದರು ಮಾತ್ರವಲ್ಲದೇ, ಅಧಿವೇಶನದಲ್ಲಿ ಪಾಲ್ಗೊಳ್ಳುವ ಅಧಿಕಾರಿಗಳು, ವರದಿಗಾರರು ಕೂಡ ಕೋವಿಡ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ.
ಇದನ್ನೂ ಓದಿ; ಹೀಗಿರಲಿದೆ ಲಾಕ್ಡೌನ್ ನಂತರದ ನಮ್ಮ ಮೆಟ್ರೋ ರೈಲು ಸವಾರಿ? 300-350 ಜನರಿಗಷ್ಟೇ ಅವಕಾಶ
ಸೆ.14ರಂದು ಸಂಸತ್ ಕಲಾಪ ಆರಂಭವಾಗಲಿದ್ದು, ಅಕ್ಟೋಬರ್ 1ರವರೆಗೆ ಮುಂದುವರಿಯಲಿದೆ. ರಾಜ್ಯಸಭೆ ಹಾಗೂ ಲೋಕಸಭೆಗಳು ಪ್ರತ್ಯೇಕ ಪಾಳಿಗಳಲ್ಲಿ ಕಲಾಪ ನಡೆಸಲಿವೆ. ಲೋಕಸಭೆ ಕಲಾಪ ಬೆಳಗ್ಗೆ 9ಕ್ಕೆ ಆರಂಭವಾದರೆ, ರಾಜ್ಯಸಭೆ ಮಧ್ಯಾಹ್ನ 3 ಗಂಟೆಗೆ ಶುರುವಾಗಲಿದೆ. ಚರ್ಚೆಗೆ ಹೆಚ್ಚಿನ ಕಾಲಾವಕಾಶ ಬೇಕಾಗಿದ್ದರೆ, ವಾರಾಂತ್ಯದಲ್ಲೂ ಮುಂದುವರಿಯುವ ಸಾಧ್ಯತೆಗಳಿವೆ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೋವಿಡ್ ತಪಾಸಣೆಗಾಗಿ ಲೋಕಸಭೆಯಲ್ಲಿಯೇ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ಈ ಅಧಿವೇಶನದಲ್ಲಿ ಒಟ್ಟು 11 ವಿಧೇಯಕಗಳು ಮಂಡನೆಯಾಗಲಿವೆ ಎಂದು ಹೇಳಲಾಗಿದೆ.
ಕೋವಿಡ್ಗಷ್ಟೇ ಅಲ್ಲ, ಎಲ್ಲ ಬಗೆ ಕರೊನಾಗೂ ಇದು ರಾಮಬಾಣ; ಕೇಂಬ್ರಿಡ್ಜ್ ವಿವಿಯಿಂದ ಸಜ್ಜಾಗ್ತಿದೆ ಲಸಿಕೆ