More

    ಭಾರತದಲ್ಲಿ ಬಹುತೇಕ ತಗ್ಗಿದ ಕೋವಿಡ್: ಆರೋಗ್ಯ ತುರ್ತಸ್ಥಿತಿ ಅಂತ್ಯ, ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ

    ಬೆಂಗಳೂರು: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಬಹುತೇಕ ತಗ್ಗಿದ್ದು ಕಳೆದ 24 ಗಂಟೆಗಳಲ್ಲಿ 1,223 ಕೇಸ್​ಗಳಷ್ಟೇ ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,498ಕ್ಕೆ (ಶೇ.0.04) ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

    ಕಳೆದ 24 ಗಂಟೆಗಳಲ್ಲಿ 2,720 ಸೋಂಕಿತರು ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4.44 ಕೋಟಿಗೂ ಅಧಿಕವಾಗಿದ್ದು, ಇದರೊಂದಿಗೆ ಚೇತರಿಕೆ ಪ್ರಮಾಣ ಶೇ.98.78ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನ ಇತ್ತೀಚಿನ ದತ್ತಾಂಶದ ಪ್ರಕಾರ ಮೂರನೇ ಅಲೆಯಲ್ಲಿ ಸಮಸ್ಯೆ ಎದುರಿಸುತ್ತಿತ್ತು. ಆದರೆ ಲಸಿಕೆ ಹಾಗೂ ಮೂರನೇ ಅಲೆಯಲ್ಲಿ ವೈರಾಣು ತೀವ್ರತೆ ತಗ್ಗಿದ್ದರಿಂದ ಹಾಗೂ ಸಾಮಾನ್ಯ ಶೀತದಂತೆ ದೇಹದ ಮೇಲೆ ಪರಿಣಾಮ ಬೀರಿದ್ದರಿಂದ ಕಡಿಮೆ ಪ್ರಮಾಣದಲ್ಲಿ ಸೋಂಕು ಹಾಗೂ ಸಾವು ಸಂಭವಿಸಿವೆ.

    ಹವಾಮಾನ ಆಧರಿಸಿ ಪರಿಶೀಲನೆ: ಹವಾಮಾನ ಆಧಾರಿತ ವಲಯಗಳಲ್ಲಿ ಕೋವಿಡ್ ಪ್ರಕರಣಗಳ ಪ್ರಗತಿಯನ್ನು ಟ್ರಾ್ಯಕ್ ಮಾಡಿದ ಸಂಶೋಧಕರು, ಆಯಾ ಪ್ರದೇಶಗಳಿಗೆ ಪೂರಕವಾಗಿ ವರದಿಯಾಗುವ ರೂಪಾಂತರಿಗಳ ಗುಂಪುಗಳು ಹಾಗೂ ಅವುಗಳ ನಡುವಿನ ಗಮನಾರ್ಹ ವ್ಯತ್ಯಾಸಗಳನ್ನು ಗುರುತಿಸಿದ್ದರು. ಇದರಿಂದ 18 ಸಾವಿರಕ್ಕೂ ಹೆಚ್ಚು ರೂಪಾಂತರಿಗಳು ಪತ್ತೆಯಾಗಿದ್ದವು. ಇದರಲ್ಲಿ ಕೋವಿಡ್ ಆರಂಭದ ಮೂರು ಅಲೆಗಳಲ್ಲಿ ಕಾಣಿಸಿಕೊಂಡಿದ್ದ ಪ್ರಮುಖ ರೂಪಾಂತರಿಗಳಾದ ಆಲ್ಪಾ, ಡೆಲ್ಟಾ ಮತ್ತು ಒಮಿಕ್ರಾನ್​ಗಳು ಕಾಣಿಸಿಕೊಂಡಿದ್ದವು. ಇದರ ಹೊರತಾಗಿ ಸಾಂಕ್ರಾಮಿಕ ರೋಗದ ಪ್ರಾರಂಭ ಮತ್ತು ಜುಲೈ 2022ರ ಅಂತ್ಯದ ನಡುವಿನ ಅವಧಿಯಲ್ಲಿ ವರದಿಯಾಗಿದ್ದ 1.20 ಕೋಟಿ ಅಧಿಕ ಜೀನೋಮ್ಳ ವಿಶ್ಲೇಷಣೆ ಮಾಡಲಾಗಿದೆ. ಈ ವೇಳೆ ಸರಾಸರಿ ಕಡಿಮೆ ತಾಪಮಾನ ಹೊಂದಿರುವ ದೇಶಗಳಲ್ಲಿ ಸೋಂಕು ಪ್ರಕರಣಗಳು ಮತ್ತು ಮರಣ ದರ ಪರಸ್ಪರ ಸಂಬಂಧ ಹೊಂದಿರುವುದು ತಿಳಿದುಬಂದಿದೆ.

    ಪರಿಸರ ಅಧ್ಯಯನ: ಎವಲ್ಯೂಷನರಿ ಬಯೋ ಇನ್ಪಾಮೇಟಿಕ್ಸ್​ನಲ್ಲಿ ಪ್ರಕಟವಾದ ಅಧ್ಯಯನದಂತೆ, ಕಳೆದ 2 ವರ್ಷಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಕುರಿತು ಅಧ್ಯಯನ ನಡೆಸಲಾಗಿದ್ದು, ಜಗತ್ತಿನಾದ್ಯಂತ 171 ದೇಶಗಳಲ್ಲಿ ಸರಾಸರಿ ವಾರ್ಷಿಕ ತಾಪಮಾನ ಮತ್ತು ಅಕ್ಷಾಂಶದೊಂದಿಗೆ ಪರಸ್ಪರ ಸಂಬಂಧ ಹೊಂದಿರುವುದು ತಿಳಿದು ಬಂದಿದೆ. ಜಾಗತಿಕ ಬದಲಾವಣೆಯ ಸೂಚಕಗಳು ಸೇರಿ ಕೋವಿಡ್ ಮತ್ತು ಪರಿಸರ ಆರೋಗ್ಯದ ನಡುವಿನ ಸಂಬಂಧಗಳ ಕುರಿತು ಸಂಶೋಧಕರು ಅಧ್ಯಯನ ಮಾಡಿದ್ದಾರೆ.

    ಆರೋಗ್ಯ ತುರ್ತಸ್ಥಿತಿ ಅಂತ್ಯ

    ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚಿಗೆ ಜಾಗತಿಕವಾಗಿ ಕೋವಿಡ್ ಸಾಂಕ್ರಾಮಿಕ ಆರೋಗ್ಯ ತುರ್ತಸ್ಥಿತಿ ಕೊನೆಗೊಂಡಿದೆ ಎಂದು ಘೋಷಿಸಿದೆ. ಆದಾಗ್ಯೂ, ಯಾವುದೇ ಹೊಸ ರೂಪಾಂತರದ ವೈರಾಣು ಪ್ರಮಾಣ ಮತ್ತು ಹರಡುವಿಕೆ ಕುರಿತು ಮೇಲ್ವಿಚಾರಣೆ ಮಾಡಬೇಕಾಗಿದೆ ಎನ್ನುತ್ತಾರೆ ತಜ್ಞರು.

    ಬೆಂಗ್ಳೂರಲ್ಲಿ ಕಾಂಗ್ರೆಸ್ 12, ಬಿಜೆಪಿ 15: ರಾಜಧಾನಿ ಮತದಾರರ ಮನಸೆಳೆದ ನರೇಂದ್ರ ಮೋದಿ ರೋಡ್ ಶೋ

    ವರುಣದಲ್ಲಿ ವಿ. ಸೋಮಣ್ಣ ಹೀನಾಯ ಸೋಲು: ಪ್ರತಾಪ್​ ಸಿಂಹ ಹೇಳಿಕೆಗಳೇ ಮುಳುವಾಯಿತು!

    ಯಡಿಯೂರಪ್ಪ ಕಣ್ಣೀರಿಗೆ ದುಬಾರಿ ಬೆಲೆತೆತ್ತ ಬಿಜೆಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts