ಬೆಂಗಳೂರು: ನೆರೆಯ ರಾಜ್ಯವಾದ ಕೇರಳದಲ್ಲಿ ಕಾಣಿಸಿಕೊಂಡಿದ್ದ ಕರೊನಾ ಸೋಂಕುನ ಉಪತಳಿ JN.1 ತಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಕರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರೋಗ್ಯ ತಜ್ಞರು ಜತೆ ಸಭೆ ನಡೆಸಿದ್ದಾರೆ.
ಆರೋಗ್ಯ ತಜ್ಞರು ಜತೆಗಿನ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ನಾವು ಈ ವೈರಸ್ಗೆ ಭಯಪಡುವ ಹಾಗೂ ಆತಂಕ ಪಡುವ ಅಗತ್ಯ ಸದ್ಯಕ್ಕೆ ಇಲ್ಲ. ಆದರೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ನ್ಯೂ ಇಯರ್ಗೆ ಹೆಚ್ಚು ಜನರು ಸೇರುತ್ತಾರೆ. ಹೆಚ್ಚು ಜನರು ಸೇರುವ ಕಡೆ ಮಾಸ್ಕ್ ಕಡ್ಡಾಯವಾಗಿದೆ ಎಂದಿದ್ದಾರೆ.
ಹೊಸ ವರ್ಷ ಹಾಗೂ ಕ್ರಿಸ್ಮಸ್ ಹಬ್ಬಕ್ಕೆ ಯಾವುದೇ ನಿಯಮ ಇಲ್ಲ. ಆದರೆ, ಜನಸಂದಣಿಯಲ್ಲಿ ಮಾಸ್ಕ್ ಹಾಕಿಕೊಳ್ಳಿ. ಕರೊನಾಗೆ ಯಾವುದೇ ಭಯ ಪಡುವ ಅಗತ್ಯವಿಲ್ಲ. 60 ವರ್ಷಕ್ಕಿಂತ ಮೇಲೆ ಪಟ್ಟವರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಮಾಸ್ಕ್ ಧರಿಸಿ ಎಂದು ನಾವು ಸಲಹೆ ನೀಡುತ್ತೇವೆ. ಆದರೆ ಮಾಸ್ಕ್ ಕಡ್ಡಾಯ ಎನ್ನುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ ಎಂದು ತಿಳಿಸಿದ್ದಾರೆ.
ಪ್ರತಿದಿನ 5 ಸಾವಿರಕ್ಕಿಂತ ಹೆಚ್ಚಿನ ಟೆಸ್ಟಿಂಗ್ ಮಾಡಲು ಈಗಾಗಲೇ ಮಾಹಿತಿ ನೀಡಲಾಗಿದೆ. ರ್ಯಾಪಿಡ್ ಮತ್ತು ಆರ್ಟಿ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತದೆ. ವೆಂಟಿಲೇಟರ್, ಆಕ್ಸಿಜನ್ಗೆ ಯಾವುದೇ ಕೊರತೆ ಆಗಬಾರದು. ಎಲ್ಲಾ ಆಸ್ಪತ್ರೆಯಲ್ಲಿಯೂ ಕರೊನಾ ಕುರಿತಾಗಿ ಸಿದ್ಧತೆ ಮಾಡಿಕೊಳ್ಳಿ. ಅಗತ್ಯ ವಿದ್ದರೆ ವ್ಯಾಕ್ಸಿನೇಷನ್ ಪ್ರಾರಂಭಿಸಲಾಗುತ್ತದೆ. ಇಂದು ತಜ್ಞರ ಸಲಹೆಗಳನ್ನು ಪಡೆದಿದ್ದೇವೆ. ಈ ಹಿಂದೆ ಮಾಡಿದ ತಪ್ಪು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದೇನೆ ಎಂದಿದ್ದಾರೆ.