ಜಲಗಾಂವ್: ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಆಸ್ಪತ್ರೆಯಿಂದ ಎಂಟು ದಿನಗಳ ಹಿಂದೆ ನಾಪತ್ತೆಯಾದ, ಭೂಸಾವಲ್ ಮೂಲದ ವೃದ್ಧೆ (82) ಅದೇ ಆಸ್ಪತ್ರೆಯ ಶೌಚಾಲಯದೊಳಗೆ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮತ್ತು ಆಕೆಯ ಸಂಬಂಧಿಕರು ತಿಳಿಸಿದ್ದಾರೆ.
ಇದನ್ನೂ ಓದಿ: ‘ಆ ದಿನಗಳು’ : ಶತಕದ ಸಂಭ್ರಮದಲ್ಲಿರುವ ವಾಯುಪಡೆಯ ಹಿರಿಯ ಸೇನಾನಿಯ ಅವಿಸ್ಮರಣೀಯ ನೆನಪುಗಳೇನು?
ಜಿಲ್ಲಾಪೇಟ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಅಕ್ಬರ್ ಪಟೇಲ್ ಹೇಳುವಂತೆ, ಜಲಗಾಂವ್ ಸರ್ಕಾರಿ ಆಸ್ಪತ್ರೆಯ ಅಧಿಕಾರಿಗಳು ಮತ್ತು ಆಕೆಯ ಕುಟುಂಬಸ್ಥರು ಜೂನ್ 2 ರಂದು ಆಕೆ ಕಾಣಿಯಾಗಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ನಂತರ ಭೂಸಾವಲ್ನಲ್ಲಿ ಸಂಪೂರ್ಣ ವಿಚಾರಣೆ ನಡೆಸಲಾಗಿತ್ತು. ಆಕೆಯ ಸಂಬಂಧಿಕರ ಸಮ್ಮುಖದಲ್ಲೇ ಎಲ್ಲ ರೋಗಿಗಳ ರೆಜಿಸ್ಟರ್ಗಳನ್ನು ಪರಿಶೀಲಿಸಿದ್ದೂ ಆಗಿತ್ತು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ನಂತರ ಜೂನ್ 6 ರಂದು ದೂರು ದಾಖಲಿಸಿರುವುದಾಗಿ ಪಟೇಲ್ ತಿಳಿಸಿದರು.
ಇದನ್ನೂ ಓದಿ: ಪತಿಗೆ ತಿಳಿಯದೇ ಮಾಡಿದಳು ಕಿತಾಪತಿ: ಪತ್ನಿಯನ್ನೇ ಯಾಮಾರಿಸಿ ಓಡಿಹೋದ ಪ್ರೇಮಿ!
ಮೇ 27 ರಂದು ಆ ವೃದ್ಧೆಗೆ ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮೊದಲು ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಣೆಯಾದ ಮಾಹಿತಿ ಬಂದ ನಂತರ ತನಿಖೆಗಾಗಿ ಪೊಲೀಸ್ ತಂಡಗಳನ್ನು ಅಲ್ಲಿಗೆ ಕಳುಹಿಸಲಾಗಿತ್ತು.
ಇದನ್ನೂ ಓದಿ: ಪೂರ್ವಜ ಇಲ್ಯಾಕೆ ಬಂದಿದ್ದ ಗೊತ್ತಾ? ಕೇಳಿದರೆ ಅಯ್ಯೋ ಪಾಪ ಅನ್ಸುತ್ತೆ
ಜೂನ್ 2 ರವರೆಗೆ ಆಕೆ ವಾರ್ಡ್ನಲ್ಲಿ ಕಾಣಿಸಿಕೊಂಡಿದ್ದರೆಂದು ಜಲಗಾಂವ್ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದು, ನಂತರ ಆಕೆ ಎಲ್ಲಿದ್ದಾರೆ ಎಂದು ತಿಳಿದಿರಲಿಲ್ಲ. ಇಂದು ಆಸ್ಪತ್ರೆಯ ಶೌಚಾಲಯವೊಂದರಲ್ಲಿ ದುರ್ವಾಸನೆ ಬಂದಿದ್ದು. ಹೋಗಿ ನೋಡಿದಾಗ ಅಲ್ಲಿ ಮಹಿಳೆಯ ಶವ ಕಂಡುಬಂತು. ಈ ಕುರಿತು ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪಟೇಲ್ ಹೇಳಿದರು.
ಇದನ್ನೂ ಓದಿ:20 ವರ್ಷದ ಪುತ್ರಿಯ ಅಮಾನುಷ ಕೊಲೆ: ಪಾಲಕರಿಂದಲೇ ಮಗಳ ಮರ್ಯಾದಾಗೇಡು ಹತ್ಯೆ?
ಅಜ್ಜಿಯ ಸಾವಿನಿಂದ ಆಕ್ರೋಶಗೊಂಡ ಆಕೆಯ ಮೊಮ್ಮಗ ಈ ಸಾವಿನ ಪ್ರಕರಣದ ತನಿಖೆ ನಡೆಸಿ, ನಿರ್ಲಕ್ಷ್ಯವಹಿಸಿದ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ವೀಡಿಯೋ ಸಂದೇಶ ಕಳುಹಿಸಿ ಮನವಿ ಮಾಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಕಾಣೆಯಾದ ಕೋವಿಡ್ -19 ರೋಗಿಗಳು ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ.
ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೊವಿಡ್-19 ಟೆಸ್ಟ್ ರಿಪೋರ್ಟ್ನಲ್ಲಿ ಹೊರಬಿದ್ದ ಸತ್ಯವೇ ಬೇರೆ…
ಮಂಗಳವಾರ, ಕೋವಿಡ್ -19 ರೋಗದಿಂದ ಬಳಲುತ್ತಿದ್ದ 80 ವರ್ಷದ ವೃದ್ಧನ ಶವ ಪತ್ತೆಯಾದ ನಂತರ ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ತನಿಖೆಗೆ ಆದೇಶಿಸಿದ್ದರು. ಆ ರೋಗಿ ಭಾನುವಾರ ಕಂಡಿವಲಿಯ ಡಾ.ಬಿ.ಆರ್. ಅಂಬೇಡ್ಕರ್ ಶತಾಬ್ದಿ ಆಸ್ಪತ್ರೆಯಿಂದ ಕಾಣಿಯಾಗಿದ್ದು, ರೈಲು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅವರ ಶವ ಬೋರಿವಲಿ ನಿಲ್ದಾಣದ ಬಳಿ ಪತ್ತೆಯಾಗಿತ್ತು.
ಮೇ ತಿಂಗಳಲ್ಲಿ ಜಾಗತಿಕವಾಗಿ ಹೆಚ್ಚು ಡೌನ್ಲೋಡ್ ಆದ ಆ್ಯಪ್ ಯಾವುದು? ಭಾರತವೇ ಮೊದಲು…!