More

    ಹಸುವಿನ ಶವ ವಾಹನಕ್ಕೆ ಕಟ್ಟಿ ಎಳೆದೊಯ್ದ ಹೆದ್ದಾರಿ ಗುತ್ತಿಗೆ ಸಂಸ್ಥೆ ಸಿಬ್ಬಂದಿ

    ಬೈಂದೂರು: ಶಿರೂರು ಟೋಲ್‌ಗೇಟ್ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟ ಹಸುವನ್ನು ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ ತಮ್ಮ ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಅಮಾನವೀಯ ಘಟನೆ ಭಾನುವಾರ ಸಾಯಂಕಾಲ ನಡೆದಿದೆ.
    ವಾಹನಕ್ಕೆ ಎಳೆದೊಯ್ಯುವ ವಿಡಿಯೋವೊಂದು ವೈರಲ್ ಆಗಿದ್ದು, ಹಿಂದೂ ಪರ ಸಂಘಟನೆಗಳು ಈ ಕುಕೃತ್ಯವನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಶಿಕ್ಷೆಗೆ ಆಗ್ರಹಿಸಿವೆ. ಹಿಂದು ಜಾಗರಣಾ ವೇದಿಕೆ ಬೈಂದೂರು ತಾಲೂಕು ಅಧ್ಯಕ್ಷ ರಾಜೇಶ್ ಆಚಾರ್ಯ, ಶ್ರೀರಾಮ ಸೇನೆಯ ಸುಬ್ರಹ್ಮಣ್ಯ, ಪ್ರಶಾಂತ್ ಮೊಯ್ಲಿ, ವೇದನಾಥ್ ಬೈಂದೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಹಸುವಿನ ಕಳೇಬರವನ್ನು ಎಳೆದೊಯ್ದ ಇಬ್ಬರು ಸಿಬ್ಬಂದಿಯನ್ನು ಬೈಂದೂರು ಪೋಲಿಸರು ಠಾಣೆಗೆ ಕರೆಸಿ ವಿಚಾರಿಸಿದ್ದಾರೆ. ಕಂಪನಿಯ ಅಧಿಕಾರಿಗಳು ಕೂಡ ಠಾಣೆಗೆ ಬಂದು ಮಾಹಿತಿ ನೀಡಿದ್ದಾರೆ. ಹಸುವಿನ ಮೃತದೇಹ ಭಾರವಾಗಿದ್ದರಿಂದ ಇಬ್ಬರಿಂದ ಎತ್ತಿ ವಾಹನಕ್ಕೆ ಹಾಕಲು ಆಗದಿರುವ ಕಾರಣ ಈ ರೀತಿ ಮಾಡಿದ್ದಾಗಿ ಹೇಳಿರುವ ಸಿಬ್ಬಂದಿ ಕ್ಷಮೆ ಕೋರಿದ್ದಾರೆ. ಬೈಂದೂರು ಠಾಣಾಧಿಕಾರಿ ಪವನ್ ನಾಯಕ್ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸೋಮವಾರ ಹಿಂದೂ ಪರ ಸಂಘಟನೆಗಳು ಶಿರೂರು ಟೋಲ್‌ಗೇಟ್ ಬಳಿ ಪ್ರತಿಭಟನೆಗೆ ಅಣಿಯಾಗಿರುವ ಮಾಹಿತಿ ಲಭ್ಯವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts