More

    ಹುಲಿ ದಾಳಿಗೆ ಹಸು ಬಲಿ

    ಗುಂಡ್ಲುಪೇಟೆ: ತಾಲೂಕಿನ ತ್ರಿಯಂಭಕಪುರ ಗ್ರಾಮದಲ್ಲಿ ಹುಲಿ ದಾಳಿ ನಡೆಸಿ ಗರ್ಭ ಧರಿಸಿದ ಹಸುವನ್ನು ಕೊಂದುಹಾಕಿದೆ.

    ಬಂಡೀಪುರ ಹುಲಿ ಯೋಜನೆಯ ಬಫರ್ ವಲಯದ ಕಾಡಂಚಿನ ಗ್ರಾಮವಾದ ತ್ರಿಯಂಭಕಪುರ ನಿವಾಸಿ ರಾಜಪ್ಪ ಅವರು ಬುಧವಾರ ಸಂಜೆ ಮಬ್ಬುಗತ್ತಲಿನಲ್ಲಿ ಜಮೀನಿನಿಂದ ತಮ್ಮ ಜಾನುವಾರುಗಳೊಂದಿಗೆ ಮನೆಗೆ ಹಿಂದಿರುಗುವಾಗ ಹುಲಿ ದಾಳಿ ನಡೆಸಿ ಕೆಲವೇ ದಿನಗಳಲ್ಲಿ ಕರು ಹಾಕಲಿದ್ದ ಹಸುವನ್ನು ಎಳೆದೊಯ್ದಿದೆ. ಗುರುವಾರ ಮುಂಜಾನೆ ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಪೊದೆಗಳ ನಡುವೆ ಹಸುವಿನ ಮೃತದೇಹ ಪತ್ತೆಯಾಗಿದೆ.

    ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದರು. ಶೀಘ್ರವೇ ಜಾನುವಾರು ನಷ್ಟಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಹುಲಿ ಕಾಡಿಗಟ್ಟಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts