ಬೆಂಗಳೂರು: ಡಿಸೆಂಬರ್ 7ರಂದು ಪ್ರಾರಂಭವಾಗಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.
ಶುಕ್ರವಾರ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಭು ಚವ್ಹಾಣ್, ಪರಿಷ್ಕೃತ ಹಾಗೂ ಸಮಗ್ರ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಗೋಹತ್ಯೆ ನಿಷೇಧ ಮಸೂದೆಯನ್ನು 2010ರಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ, ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು. ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.
ರಾತ್ರೋರಾತ್ರಿ ಮನೆಗೆ ಬಂದ ಪರ ಪುರುಷನೊಂದಿಗೆ ಸೊಸೆ ಲವ್ವಿ-ಡವ್ವಿ! ಎಚ್ಚರಗೊಂಡ ಅತ್ತೆಗೆ ಕಾದಿತ್ತು ಗಂಡಾಂತರ
ಅಯ್ಯೋ, ಅಮ್ಮ ಬೇಗ ಬಾ.. ಹಸುಗಳು ಕೂಗುತ್ತಿವೆ… ಎನ್ನುತ್ತ ಒಳಗೆ ಬಂದ ಮಗನಿಗೆ ಕಾದಿತ್ತು ಶಾಕ್!