ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥನಿಗೆ ತೊಟ್ಟಿಲು ಶಾಸ್ತ್ರ

blank

ಮೈಸೂರು ರಾಜವಂಶಸ್ಥ, ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ದಂಪತಿ ಕಿರಿಯ ಪುತ್ರನಿಗೆ ಚಾಮುಂಡಿ ಬೆಟ್ಟದಲ್ಲಿ ಬುಧವಾರ ತೊಟ್ಟಿಲು ಶಾಸ್ತ್ರ ನೆರವೇರಿತು.
ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಹಾಗೂ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ದೇವಿಗೆ ಪೂಜಾವಿಧಿ ಮುಗಿದ ನಂತರ ಚಾಮುಂಡಿಬೆಟ್ಟದ ದೇವಾಲಯದ ಬಳಿ ಇರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಶಾಸ್ತ್ರ ನೆರವೇರಿಸಲಾಯಿತು. ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್, ಮೊದಲ ಪುತ್ರ ಆದ್ಯವೀರ, ದೇವಸ್ಥಾನದ ಪ್ರಧಾನ ಆರ್ಚಕ ಶಶಿಶೇಖರ ದೀಕ್ಷಿತ್ ಇತರರು ಇದ್ದರು.
ಎರಡು ತಿಂಗಳ ಹಿಂದೆ ಮೈಸೂರು ದಸರಾ ಸಂದರ್ಭದಲ್ಲಿ ಯದುವೀರ್ ಅವರು ಕಂಕಣಧಾರಿಯಾಗಿದ್ದ ವೇಳೆ ತ್ರಿಷಿಕಾ ಎರಡನೇ ಗಂಡು ಮಗುವಿಗೆ ಜನ್ಮ ನೀಡಿದ್ದರು.

Share This Article

ಮಂಗಳನ ಸಂಚಾರದಿಂದ ರೂಪುಗೊಳ್ಳಲಿದೆ ಮಂಗಳ-ಪುಷ್ಯ ಯೋಗ! ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳು ಹಾಗೂ ಗ್ರಹಗಳ ಸಂಚಾರವೂ ವ್ಯಕ್ತಿಯು ಜನಿಸಿದ…

ನಿಮ್ಮನೆ ಮುದ್ದಿನ ನಾಯಿ ನಿಮ್ಮ ಮುಖವನ್ನು ನೆಕ್ಕುತ್ತದೆಯೇ? ಇರಲಿ ಎಚ್ಚರ.. Dog Licking Human Face

Dog Licking Human Face: ಆಧುನಿಕ ಜೀವನದಲ್ಲಿ ಹೆಚ್ಚಿನ ಜನರು ತಮ್ಮ ಮನೆಯಲ್ಲಿ ನಾಯಿಮರಿಗಳನ್ನು ಮನೆ…

ತಾಮ್ರದ ಉಂಗುರ ಧರಿಸುವುದು ಒಳ್ಳೆಯದಾ? ಕೆಟ್ಟದ್ದಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Copper Ring

Copper Ring : ಅನೇಕ ಜನರು ಬೆರಳುಗಳಿಗೆ ಉಂಗುರಗಳನ್ನು ಧರಿಸುತ್ತಾರೆ. ಕೆಲವರಿಗೆ ಇದು ಫ್ಯಾಶನ್​ ಆಗಿದ್ದಾರೆ,…