ಫಲಿತಾಂಶ ಹೆಚ್ಚಿಸಲು ಕಾರ್ಯಯೋಜನೆ ರೂಪಿಸಿ

gururaj gantiholi

ಬೈಂದೂರು: ಎಸ್‌ಎಸ್‌ಎಲ್‌ಸಿ ಪ್ರತಿ ವಿದ್ಯಾರ್ಥಿಯ ಜೀವನದಲ್ಲಿ ಅತೀ ಪ್ರಮುಖವಾದ ಟ್ಟ. ಹಾಗಾಗಿ ಶಾಲಾ ಶಿಕ್ಷಕರು ಸೇರಿದಂತೆ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಅರಿತುಕೊಳ್ಳಬೇಕು. ಪರಸ್ಪರ ಸಮನ್ವಯ ಸಾಧಿಸಿದರೆ ವಾತ್ರ ಉತ್ತಮ ಫಲಿತಾಂಶ ಹೊರ ಹೊಮ್ಮಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರಸ್ತುತ ಸಾಲಿನ ಫಲಿತಾಂಶದ ಕುರಿತು ಪರಾಮರ್ಶೆ ನಡೆಸಿ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಈಗಿನಿಂದಲೇ ಕಾರ್ಯಯೋಜನೆ ಹಾಕಿ ಕೊಳ್ಳಿ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

blank

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ, ಬೈಂದೂರು ಕ್ಷೇತ್ರದ ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‌ಸಿಸಿ, ಸಿಆರ್‌ಪಿ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮಾತನಾಡಿದರು.

ಮಕ್ಕಳಲ್ಲಿ ಮಕ್ಕಳು ಓದುವ ಹವ್ಯಾಸ ಹೆಚ್ಚಿಸುವ ಉದ್ದೇಶದಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ಶಾಲಾ ಗ್ರಂಥಾಲಯಗಳಿಗಾಗಿ ಈಗಾಗಲೇ 2 ಲಕ್ಷ ರೂ. ಮೊತ್ತದಲ್ಲಿ ಪುಸ್ತಕಗಳನ್ನು ಖರೀದಿಸಲಾಗಿದ್ದು, ಕ್ಷೇತ್ರ ವ್ಯಾಪ್ತಿಯ ಎಲ್ಲ ಸರ್ಕಾರಿ ಹಾಗೂ ಪ್ರೌಢ ಶಾಲೆಗಳಿಗೆ ಜೂನ್ ಮೊದಲ ವಾರದಲ್ಲಿ ಹಂಚಿಕೆ ವಾಡಲಾಗುವುದು ಎಂದು ತಿಳಿಸಿದರು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ. ನಾಯ್ಕ, ಬೈಂದೂರು ಹಾಗೂ ಕುಂದಾಪುರ ವಲಯ ವ್ಯಾಪ್ತಿಯ ಶಿಕ್ಷಣ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ಉಪಸ್ಥಿತರಿದ್ದರು.

ಶಿಥಿಲಾವಸ್ಥೆಯಲ್ಲಿ ಸರ್ಕಾರಿ ಕಟ್ಟಡಗಳು

ಬೇಸಿಗೆ ಶಿಬಿರದಿಂದ ಮಕ್ಕಳ ಜ್ಞಾನ ವೃದ್ಧಿ

 

Share This Article
blank

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

ದಿನವಿಡೀ ಮೊಬೈಲ್​ ನೋಡ್ತಾನೇ ಇರ್ತೀರಾ? ಈ ಚಟದಿಂದ ಹೊರ ಬರಲು ಇದೇ ಸರಳ ಮಾರ್ಗ…mobile

mobile: ಇಂದಿನ ಡಿಜಿಟಲ್ ಜಗತ್ತಿನಲ್ಲಿ, ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಟಿವಿಗಳು ನಮ್ಮ ದೈನಂದಿನ ಜೀವನದ ಅವಿಭಾಜ್ಯ…

blank