ನವದೆಹಲಿ: ಜೆಎನ್ಯು ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರ ಪ್ರಕರಣವನ್ನು ದೆಹಲಿ ಪೊಲೀಸರು ಸೋಮವಾರ ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದಾರೆ. ಕ್ರೈ ಬ್ರ್ಯಾಂಚ್ ಪೊಲೀಸರ ಎರಡು ತಂಡ ಪ್ರಕರಣದ ತನಿಖೆ ನಡೆಸಲಿದೆ.
ಈಗಾಗಲೇ ವಿವಿಯ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿಯಾಗಿ ಜೆಎನ್ಯುವಿನಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು ಈಗಾಗಲೇ ಕೆಲವು ಸಾಕ್ಷಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ವಿದ್ಯಾರ್ಥಿಗಳೊಂದಿಗೆ ಕೂಡ ಮಾತುಕತೆ ನಡೆಸುತ್ತಿದ್ದಾರೆ.
ನೈಋತ್ಯ ಪೊಲೀಸ್ ಉಪ ಆಯುಕ್ತ ದೇವೇಂದ್ರ ಆರ್ಯ ಹಾಗೂ ಜಂಟಿ ಪೊಲೀಸ್ ಆಯುಕ್ತ ಆನಂದ್ ಮೋಹನ್ ಅವರು ವಿವಿ ಕ್ಯಾಂಪಸ್ಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ಮಾಡಿದ್ದಾರೆ. (ಏಜೆನ್ಸೀಸ್)