More

    ಜೀವಾವಧಿ ಶಿಕ್ಷೆಗೊಳಗಾಗಿದ್ದವ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಪರಾರಿ; 3 ವರ್ಷಗಳ ಕಾಲ ಸಿಗದೇ ಇರಲು ಹೀಗೆ ಮಾಡಿದ್ದ…

    ಚಾಮರಾಜನಗರ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದವ ಕಾರಾಗೃಹದಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ತಪ್ಪಿಸಿಕೊಂಡು ಪರಾರಿಯಾಗಿದ್ದು, ಕೊನೆಗೂ ಮೂರು ವರ್ಷಗಳ ಬಳಿಕ ಮತ್ತೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

    ಚಾಮರಾಜನಗರ ಗಾಳಿಪುರ ಬಡಾವಣೆಯ ರಫೀಕ್​ ಎಂಬಾತ ಸಿಕ್ಕಿಬಿದ್ದ ಅಪರಾಧಿ. ಈತ ಮೂರು ವರ್ಷಗಳ ಹಿಂದೆ ಪೊಲೀಸರು ಕಾರಾಗೃಹದಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ತಪ್ಪಿಸಿಕೊಂಡು ಪರಾರಿಯಾಗಿದ್ದ. ಪೊಲೀಸರಿಗೆ ತನ್ನ ಜಾಡು ಸಿಗಬಾರದು ಎಮಬ ಕಾರಣಕ್ಕೆ ಈತ ಮೂರು ವರ್ಷ ಯಾವುದೇ ಫೋನ್​ ಬಳಸಿರಲಿಲ್ಲ. ಹೀಗಾಗಿ ಪೊಲೀಸರು ಈತನ ಪತ್ತೆಗೆ ಪ್ರಯತ್ನಿಸಿದ್ದರೂ ಪ್ರಯೋಜನವಾಗಿರಲಿಲ್ಲ.

    ಇದನ್ನೂ ಓದಿ: ಯಾವ ರಕ್ತದ ಗುಂಪಿನ ಮೇಲೆ ಕರೊನಾ ಹೆಚ್ಚು ಪರಿಣಾಮ ಬೀರಲಿದೆ? ಹೊಸ ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ

    ಈತನ ವಿರುದ್ಧ ಮೈಸೂರು, ಚಾಮರಾಜನಗರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಇವನು ಮನೆ ಕಳ್ಳತನ, ರಾಬರಿ ಮುಂತಾದ ಅಪರಾಧಗಳಲ್ಲಿ ಭಾಗಿಯಾಗಿದ್ದ.

    ಇದನ್ನೂ ಓದಿ: ಅವಳ ಮನೆಗೆ ಅವನು ಬಂದಾಗ ಹಿಡ್ಕೊಂಡ ಜನರು; ಇಬ್ಬರನ್ನೂ ಕಂಬಕ್ಕೆ ಕಟ್ಟಿ ಮನ ಬಂದಂತೆ ಹಲ್ಲೆ: ಅನೈತಿಕ ಸಂಬಂಧ ಹೊಂದಿದ್ದಕ್ಕೆ ಘೋರ ಶಿಕ್ಷೆ?

    ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಈತ ಬಳ್ಳಾರಿಯಲ್ಲಿ ಬೀದಿ ಬದಿಯಲ್ಲಿ ಪರೋಟ ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಚಾಮರಾಜನಗರ ಪೊಲೀಸರು ಬಳ್ಳಾರಿಯಲ್ಲಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿದ್ದಾರೆ. ರಫೀಕ್ ಬಂಧನಕ್ಕಾಗಿ ಚಾಮರಾಜನಗರ ಎಸ್​ಪಿ ದಿವ್ಯಾ ಸಾರಾ ಥಾಮಸ್​ ವಿಶೇಷ ತಂಡ ರಚಿಸಿದ್ದು, ಈ ತಂಡ ಒಂದು ತಿಂಗಳ ಸತತ ಪ್ರಯತ್ನದ ಬಳಿಕ ಈತನನ್ನು ಪತ್ತೆ ಹಚ್ಚಿ ಬಂಧಿಸಿದೆ.

    ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!

    ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವೈದ್ಯರ ಸಮ್ಮೇಳನದಲ್ಲೇ ಹರಡಿತು ಒಮಿಕ್ರಾನ್!: ಎಲ್ಲವೂ ಗುಟ್ಟುಗುಟ್ಟು.. ಮಾಡಲಾಯಿತೇ ನಿರ್ಲಕ್ಷ್ಯ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts