More

    ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; ಹೊಸಕೋಟೆ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ!

    ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್​ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ.

    ಈ ಮೂರು ಜನ ಅಂತರ್​​ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ.

    ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು ಮತ್ತು ಚಿನ್ನಾಭರಣಗಳನ್ನ ಪಾಲಿಶ್ ಮಾಡುವ ನೆಪದಲ್ಲಿ ಬರುತ್ತಿದ್ದರು. ಈ ವೇಳೆ ಮಹಿಳೆಯರ ಗಮನ ಬೆರೆಡೆ ಸೆಳೆದು ಚಿನ್ನಾಭರಣ ದೋಚಿ ಎಸ್ಕೇಪ್‌ ಆರೋಪಿಗಳು ಆಗುತ್ತಿದ್ದರು.

    ಇವರು ಬೆಂಗಳೂರು, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಕಳ್ಳತನ ಕೃತ್ಯಗಳನ್ನು ಮಾಡುತ್ತಿದ್ದರು. ಇದಿಷ್ಟೇ ಅಲ್ಲದೇ ವಯೋವೃದ್ದರನ್ನು ಯಾಮಾರಿಸಿ ಚಿನ್ನಾಭರಣ ದೋಚುತ್ತಿದ್ದರು ಎನ್ನಲಾಗಿದೆ. ಹೊಸಕೋಟೆ ನಗರದಲ್ಲೂ ಇದೇ ರೀತಿ ಮಾಡಿ ಈ ಮೂವರು ಎಸ್ಕೇಪ್ ಆಗಿದ್ದರು. ಹೀಗಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ‌ ನಡೆಸಿ ಇವರನ್ನು ಬಂಧಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts