ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಿ

blank

ಹಿರೇಬಾಗೇವಾಡಿ: ರಾಜ್ಯಸರ್ಕಾರ ರೈತರ ಭಾವನೆಗಳೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು ಕೂಡಲೇ ಬೆಳೆನಷ್ಟ ಪರಿಹಾರ ವಿತರಿಸಲಿ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಜಿಪಂ ಕೃಷಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶಂಕರ ಮಾಡಲಗಿ ಸಲಹೆ ನೀಡಿದರು.

ಹಿರೇಬಾಗೇವಾಡಿ ರೈತರ ಹೊಲಗಳಿಗೆ ಶುಕ್ರವಾರ ಭೇಟಿ ನೀಡಿ, ಅತಿವೃಷ್ಟಿಯಿಂದ ಹಾಳಾದ ಬೆಳೆ ಹಾನಿ ಪರಿಶೀಲಿಸಿ ಮಾತನಾಡಿದರು.

ಸರ್ಕಾರ ರೈತರು ಮೊಬೈಲ್ ಮೂಲಕ ಬೆಳೆ ಹಾನಿ ಸಮೀಕ್ಷೆ ಮಾಡುವಂತೆ ಹೇಳಿದೆ. ಆದರೆ, ಅದು ಎಷ್ಟು ರೈತರಿಂದ ಸಾಧ್ಯ? ಮೊಬೈಲ್ ಬಳಕೆ ಬಗ್ಗೆ ಅನೇಕ ರೈತರಿಗೆ ಗೊತ್ತಿಲ್ಲ. ಇನ್ನು, ರೈತರು ಬೆಳೆಹಾನಿ ಬಗ್ಗೆ ಮೊಬೈಲ್‌ನಲ್ಲಿ ಅಪ್‌ಲೋಡ್ ಮಾಡಿದ್ದನ್ನು ಯಾರು ಸರಿಯಾಗಿ ನೋಡುತ್ತಾರೆ? ರೈತರಿಗೆ ಹಾನಿ ಪರಿಹಾರ ಕೊಡುವುದನ್ನು ಬಿಟ್ಟು ಸರ್ಕಾರ ಸುಮ್ಮನೇ ಕಾಲ ಹರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೆಡಿಎಸ್ ವಕ್ತಾರ ಶ್ರೀಶೈಲ ಡಗಲ್ಲ, ಬಸವರಾಜ ಧೂಳಪ್ಪನವರ, ರಾಜು ರೊಟ್ಟಿ, ನಿಂಗನಗೌಡ ದೊಡಗೌಡ್ರ, ನಿಂಗನಗೌಡ ಅಂಕಲಗಿ, ನಾಗನಗೌಡ ಅಂಕಲಗಿ, ಭೀಮಪ್ಪ ಮಾದುಭರಮಣ್ಣವರ, ಮಹಾಂತೇಶ ಅಮರಾಪುರ ಇತರರು ಇದ್ದರು.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…