More

    ಸಿಆರ್‌ಪಿಎ್ ಮಹಿಳಾ ಸಿಬ್ಬಂದಿ ಪಥ ಸಂಚಲನ

    ಬಾಳೆಹೊನ್ನೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಲು ಸಿಆರ್‌ಪಿಎ್ ಮಹಿಳಾ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿಗಳು ಗುರುವಾರ ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು.
    ಪಥ ಸಂಚಲನದ ನಂತರ ಎನ್.ಆರ್.ಪುರ ಸಿಪಿಐ ಗುರುಕಾಮತ್ ಮಾತನಾಡಿ, ಪೊಲೀಸರ ಆತ್ಮಸ್ಥೈರ್ಯ ಹೆಚ್ಚಿಸಲು ಹಾಗೂ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆಗೆ ಪೊಲೀಸರು ಇದ್ದಾರೆ ಎಂಬ ವಿಶ್ವಾಸ ಮೂಡಿಸಲು ಪಥ ಸಂಚಲನ ನಡೆಸಲಾಗುತ್ತಿದೆ ಎಂದು ತಿಳಿಸಿದರು.
    ಈ ಮೂಲಕ ಸಮಾಜಘಾತುಕ ಶಕ್ತಿಗಳಿಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆ ಮಾಡಲು ಬಿಡುವುದಿಲ್ಲ ಎಂಬ ಸಂದೇಶ ರವಾನಿಸಲಾಗುತ್ತಿದೆ. ಸಾರ್ವಜನಿಕರು ಚುನಾವಣೆ ವೇಳೆ ನಿರ್ಭೀತವಾಗಿ ಮಾಡಬೇಕು ಎಂಬ ಉದ್ದೇಶದಿಂದ ಪಥ ಸಂಚಲನ ನಡೆಸಲಾಗುತ್ತಿದೆ ಎಂದರು.
    ಜತೆಗೆ ಸಾರ್ವಜನಿಕರಿಗೆ ಚುನಾವಣೆ ಕುರಿತು ಜಾಗೃತಿ ಮೂಡಿಸುತ್ತಿದ್ದು, ಸಾರ್ವಜನಿಕರು ತಪ್ಪದೇ ಮತ ಚಲಾಯಿಸಿ ನಿಮ್ಮ ಆಯ್ಕೆ ಅಭ್ಯರ್ಥಿಯನ್ನು ಚುನಾಯಿಸಬೇಕು. ಯಾವುದೇ ಬೆದರಿಕೆ, ಆಸೆ, ಆಮಿಷಗಳಿಗೆ ಬಲಿಯಾಗದೆ ತಮ್ಮ ಮತ ಚಲಾಯಿಸಬೇಕು. ಚುನಾವಣೆ ವೇಳೆ ಯಾವುದೇ ಅಕ್ರಮ ಚಟುವಟಿಕೆಗಳು, ಅಕ್ರಮ ಮದ್ಯ ಮಾರಾಟ, ಒತ್ತಡ ಹೇರುವುದು ಕಂಡು ಬಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಕೋರಿದರು.
    ಪಿಎಸ್‌ಐ ರವೀಶ್, ಅಭಿಷೇಕ್, ಸಿಆರ್‌ಪಿಎ್ ಸಿಪಿಐ ವಿದ್ಯಾಕುಮಾರಿ, ಸ್ಮಿತಾ ಮತ್ತಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts